ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಮಾತನಾಡಿದರು.
ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ ಎಂದರು.
ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ತಿಳಿಸಿದರು.
ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…