ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಮಾತನಾಡಿದರು.
ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ ಎಂದರು.
ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ತಿಳಿಸಿದರು.
ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…