ಎಲ್ಲಾ ಜಾತಿಗಳಿಗೂ ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ನಿರ್ಮೂಲನೆ ಸಾಧ್ಯ- ಸಿಎಂ ಸಿದ್ದರಾಮಯ್ಯ

ವಚನ ಎಂದರೆ ಮಾತು. ಶರಣರ ವಚನ ಜನರ ಭಾಷೆಯಲ್ಲಿವೆ. ಆದ್ದರಿಂದ ವಚನ ಸಾಹಿತ್ಯ, ಜನರ ಸಾಹಿತ್ಯವೇ ಆಗಿದೆ. ಹಿಂದೆ ಸಂಸ್ಕೃತ ಕಲಿತರೆ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇತ್ತು. ಇದರಿಂದಲೇ ಭಾರತೀಯ ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಶಿಕ್ಷಣ ಇಲ್ಲದ ಕಾರಣಕ್ಕೆ ಅಸಮಾನತೆ ಬೆಳೆಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

“ನಮ್ಮ‌ ಸಂವಿಧಾನ ವೈರುದ್ಯತೆ ಇರುವ ಸಮಾಜದಲ್ಲಿ ಜಾರಿ ಆಗುತ್ತಿದೆ. ಪ್ರಜಾಪ್ರಭುತ್ವದ ಕಾರಣದಿಂದ ರಾಷ್ಟ್ರಪತಿಯಿಂದ ಪೌರ ಕಾರ್ಮಿಕರವರೆಗೂ ಎಲ್ಲರಿಗೂ ಒಂದೇ ಮತ ಎನ್ನುವ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ. ಇದು ಸಿಗದೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎನ್ನುವ ಅಂಬೇಡ್ಕರ್ ಅವರ ಮಾತು ಇಂದಿಗೂ ಮನನ‌ ಮಾಡಿಕೊಳ್ಳುವಂತಹುದ್ದು ಎಂದರು.

ಇವನಾರವ ಇವನಾರವ ಎಂದು ವಚನ ಹೇಳೋದು, ಈ ಕಡೆ ಬಂದು ಅವನು ಯಾವ ಜಾತಿ ಎಂದು ಕೇಳೋದು ನಡೆಯುತ್ತಿದೆ. ಹೀಗಾದರೆ ಬಸವಣ್ಣನವರ ಆಶಯದಂತೆ ಜಾತಿ ನಿರ್ಮೂಲನೆ ಆಗಲ್ಲ. ಜಾತಿಗೆ ಚಲನೆಯಿಲ್ಲ. ವರ್ಗಕ್ಕೆ ಚಲನೆ ಇದೆ. ಎಲ್ಲಾ ಜಾತಿಗಳಿಗೂ ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ನಿರ್ಮೂಲನೆ ಸಾಧ್ಯ ಎಂದು ತಿಳಿಸಿದರು.

ಇವನಾರವ ಇವನಾರವ ಎಂದು ವಚನ ಹೇಳುತ್ತಲೇ ಜಾತಿ ಮಾಡುವವರು ಇದ್ದಾರೆ. ಬಸವಣ್ಣನವರು ಮತ್ತು ಶರಣರು ಕರ್ಮಸಿದ್ಧಾಂತದ ವಿರುದ್ಧ ಹೋರಾಟ ನಡೆಸಿದರು. ಆದರೆ ಈಗ ಶಿಕ್ಷಣ ಪಡೆದವರೇ ಜನ್ಮ ಜನ್ಮಗಳಲ್ಲಿ ನಂಬಿಕೆ ಇಟ್ಟು ಕರ್ಮ ಸಿದ್ಧಾಂತ ಆಚರಿಸುತ್ತಿದ್ದಾರೆ. ಒಂದು ಕಡೆ ಬಸವ ಜಯಂತಿ ಆಚರಿಸೋದು ಮತ್ತೊಂದು ಕಡೆ ಕರ್ಮಸಿದ್ಧಾಂತ ಆಚರಿಸೋದು ಮಾಡಿದರೆ ಬಸವ ಜಯಂತಿಗೆ ಅರ್ಥ ಇಲ್ಲ ಎಂದರು.

ಬಸವಣ್ಣ ಅರ್ಥ ಆಗಬೇಕು ಅಂದರೆ ಮೊದಲು ಕರ್ಮಸಿದ್ಧಾಂತ ಮತ್ತು ಹಣೆಬರಹ ಎನ್ನುವ ಮೌಢ್ಯವನ್ನು ಬಿಡುವ ಶಪಥ ಮಾಡಬೇಕು.
ಆಚಾರವೇ ಸ್ವರ್ಗ-ಅನಾಚಾರವೇ ನರಕ ಎನ್ನುವ ಬಸವಣ್ಣನವರ ಮೌಲ್ಯ ಪಾಲಿಸುವ ಶಪಥ ಮಾಡಿ ನೋಡೋಣ. ಧರ್ಮ ಎಂದರೆ ಭಯಾನಕವಾಗಿ ರಾಶಿ ರಾಶಿ ಏನೇನೋ ಹೇಳ್ತಾರೆ. ಇದ್ಯಾವುದೂ ಧರ್ಮ ಅಲ್ಲ. ಬಸವಣ್ಣನವರು ಬಹಳ ಸರಳವಾಗಿ “ದಯೆಯೇ ಧರ್ಮದ ಮೂಲವಯ್ಯ” ಎಂದಿದ್ದಾರೆ. ಇಷ್ಟು ಸರಳ ಮತ್ತು ಸುಂದರವಾದ ಮೌಲ್ಯವೇ ಧರ್ಮ ಎಂದು ತಿಳಿಸಿದರು.

ಬಸವಣ್ಣನವರ ಆಶಯಗಳು, ಬಸವಣ್ಣನವರ ಮೌಲ್ಯಗಳು, ಅಂಬೇಡ್ಕರ್ ಅವರ ಸಂವಿಧಾನದ ಆಶಯ ಮತ್ತು ಮೌಲ್ಯಗಳು ಒಂದೇ ಆಗಿವೆ. ಇದನ್ನು ಅರ್ಥ ಮಾಡಿಕೊಂಡು, ಪಾಲಿಸದೇ ಹೋದರೆ ಕೇವಲ ಬಸವಣ್ಣನವರ ಬಗ್ಗೆ ಭಾಷಣ ಮಾಡುವುದರಿಂದ ಸಮಾಜಕ್ಕೆ ಎನೂ ಒಳ್ಳೆಯದು ಮಾಡಲು ಸಾಧ್ಯವಿಲ್ಲ ಎಂದರು.

ಗೋರುಚ ಅವರ ಸಮಿತಿ ವರದಿಯಂತೆ ಅನುಭಾವಿಗಳ ಅನುಭವ ಮಂಟಪ ಮಾಡುವ ಕೆಲಸ ಆಗಿದ್ದು ನಮ್ಮಿಂದ. ಇದನ್ನು ಈ ವರ್ಷವೇ ಪೂರ್ಣಗೊಳಿಸುತ್ತೇವೆ. ಬಸವಣ್ಣರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಾವೇ. ಅಕ್ಕಮಹಾದೇವಿ ವಿಶ್ವ ವಿದ್ಯಾಲಯ ನಾಮಕಾರಣ ಮಾಡಿದ್ದು ನಾವೇ. ಇದಕ್ಕೆ ಶರಣರ ಬದುಕು ಸ್ಪೂರ್ತಿಯಾಗಿದೆ ಎಂದು ಹೇಳಿದರು.

ಕನಕದಾಸರು, ಬಸವಣ್ಣ ಇಬ್ಬರೂ ಸಂಸ್ಕೃತದಲ್ಲಿ ಏನೂ ಹೇಳಲಿಲ್ಲ. ಜನರ ಭಾಷೆಯಲ್ಲಿ, ಜನರಿಗೆ ಅರ್ಥ ಆಗುವ ರೀತಿ ಅತ್ಯಂತ ಸರಳವಾಗಿ ಧರ್ಮ ಮತ್ತು ಮೌಲ್ಯವನ್ನು ಸಾರಿದರು. ಯಾವ ಭಾಷೆಯನ್ನಾದರೂ ಕಲಿಯಿರಿ. ಆದರೆ ಜನರಾಡುವ ಭಾಷೆಯಲ್ಲಿ ಮಾತನಾಡಿ, ಮೌಲ್ಯಗಳನ್ನು ವಿವರಿಸಿ ಎಂದರು. ಮಾತೃಭಾಷೆ, ತಾಯಿ ಭಾಷೆ, ನಮ್ಮ ನೆಲದ ಭಾಷೆಯಲ್ಲಿ ಬಸವಾದಿ ಶರಣರು ತಮ್ಮ ಅನುಭವಗಳನ್ನು ಜನರಿಗೆ ತಿಳಿಸಿದರು ಎಂದರು.

ಬಸವಾದಿ ಶರಣರ ಆಶಯ ಮತ್ತು ಮೌಲ್ಯಗಳನ್ನು ನಾನು ಜಾರಿಗೆ ತರಲು ಮುಂದಾದರೆ ಅದಕ್ಕೂ ಅಡ್ಡಿಪಡಿಸುವವರು, ವಿರೋಧಿಸುವವರು ಇದ್ದಾರೆ. ಆದ್ದರಿಂದ ಸಮ ಸಮಾಜ ಬೇಕೋ? ಜಾತಿ ಸಮಾಜ ಬೇಕೋ? ಎನ್ನುವ ನಿರ್ಧಾರವನ್ನು ಜನರಿಗೇ ಬಿಡುತ್ತಿದ್ದೇನೆ ಎಂದರು.

ದೇವರಿಗೂ ಮತ್ತು ಜನರಿಗೂ ನಡುವೆ ಮಧ್ಯವರ್ತಿಗಳು ಇರಬಾರದು ಎನ್ನುವುದೇ ಬಸವಣ್ಣನವರ ಮಾತಾಗಿತ್ತು. ಅದಕ್ಕೇ ದೇಹವೇ ದೇಗುಲ ಎಂದು ವಚನ ರಚಿಸಿದರು.
ಬಸವಾದಿ ಶರಣರ ಆಶಯದಂತೆ ಇಷ್ಟಲಿಂಗ ಪೂಜೆ ಮಾಡುವಾಗಲಾದರೂ ಮಧ್ಯವರ್ತಿಗಳು ಇರಬಾರದು ಎಂದು ಹೇಳಿದರು.

ಮನುವಾದಿಗಳು ಬಸವತತ್ವದ ವಿರೋಧಿಗಳು. ಮನುಷ್ಯ ತತ್ವಕ್ಕೆ ವಿರುದ್ಧ ಇರುವವರು ಮನುವಾದಿಗಳು. ಮನುಷ್ಯತ್ವ ಪಾಲಿಸುವವರು ಬಸವವಾದಿಗಳು. ಆಯ್ಕೆ ನಿಮ್ಮದು. ಮನುವಾದಿಗಳು ಬೇಕೋ, ಬಸವವಾದಿಗಳು ಬೇಕೋ ನೀವೇ ನಿರ್ಧರಿಸಿ ಎಂದರು.

ಪ್ರಜಾಪ್ರಭುತ್ವ ಹುಟ್ಟಿದ್ದು ಇಂಗ್ಲೆಂಡ್ ನಲ್ಲಿ ಅಲ್ಲ. 900 ವರ್ಷಗಳ ಹಿಂದೆ ಸ್ಥಾಪಿತವಾದ ಅನುಭವ ಮಂಟಪವೇ ಮೊದಲ ಪ್ರಜಾಪ್ರಭುತ್ವದ ಕೇಂದ್ರ. ವಿಶ್ವಕ್ಕೆ ಪ್ರಜಾಪ್ರಭುತ್ವ ಪರಿಚಯಿಸಿದ ನಮ್ಮ ಭಾರತ ದೇಶ ಇಂದು ಸರ್ವಾಧಿಕಾರದ ಕಡೆ ಮುಖ ಮಾಡುತ್ತಿರುವುದು ದುರಂತ.
ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರುತ್ತದೆ. ಸರ್ವಾಧಿಕಾರದಲ್ಲಿ ಚರ್ಚೆಗೆ ಅವಕಾಶ ಇಲ್ಲ, ಏಕಮುಖವಾಗಿ “ನಾನು ಹೇಳಿದ್ದನ್ನು ನೀವು ಕೇಳಿ” ಎನ್ನುವುದಷ್ಟೆ ಇರುತ್ತದೆ. “ಮನ್ ಕಿ ಬಾತ್” ರೀತಿ ನಾನು ಹೇಳ್ತೀನಿ, ನೀವು ಕೇಳಿ ಅನ್ನೋದು ಸರ್ವಾಧಿಕಾರಿ ಧೋರಣೆ ಎಂದು ಹೇಳಿದರು.

ಆರ್ಥಿಕ ಅಸಮಾನತೆಯು ಗುಲಾಮಗಿರಿ ಬೆಳೆಸುತ್ತದೆ, ಸ್ವಾಭಿಮಾನ ಅಳಿಸುತ್ತದೆ. ಕಾಯಕ ಮತ್ತು ದಾಸೋಹ ಬಸವಾದಿ ಶರಣರು ನಮಗೆ ಕೊಟ್ಟಿರುವ ಆರ್ಥಿಕ‌ ಸಿದ್ಧಾಂತ. ಇದನ್ನು ಪಾಲಿಸಿದರೆ ಮಾತ್ರ ಬಸವ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.

ಕಲ್ಯಾಣಮ್ಮ‌ ಜನಸ್ಥಳವನ್ನು ಅಭಿವೃದ್ಧಿ ಪಡಿಸಲಾಗಿವುದು, ಬಸವಣ್ಣ ನೀಲಾಂಬಿಕೆಯ ವಿಗ್ರಹವನ್ನೂ ಮಾಡಿಸೋಣ. ಇವೆಲ್ಲವನ್ನೂ ನಾವು ಮಾಡ್ತೀವಿ. ಆದರೆ ನೀವೂ ಸ್ವಲ್ಪ ಬದಲಾಗಿ, ಎಲ್ಲರನ್ನೂ “ಇವ ನಮ್ಮವ” ಎನ್ನಬೇಕು. ಇಷ್ಟೇ ನನ್ನ ಮನವಿ ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

6 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago