ಕೆರೆ, ಕುಂಟೆ, ಕೋಟೆ, ಪೇಟೆಗಳನ್ನು ನಿರ್ಮಿಸಿದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗೆ ಶ್ರಮಿಸಿದವರು. ಬೆಂಗಳೂರು ನಗರವು ವಿಶ್ವದಲ್ಲಿ ಹೆಸರು ಮಾಡಲು ಕಾರಣ ಎಂದರೆ ಅದು ಕೆಂಪೇಗೌಡರ ಕೊಡುಗೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಇಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ(ಪುತ್ಥಳಿ) ಅನಾವರಣಗೊಳಿಸಿ ಹಾಗೂ ಜಯಂತ್ಯೋತ್ಸವ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರ ವಂಶಸ್ಥರ ಮೂಲ ಸ್ಥಾನ ದೇವನಹಳ್ಳಿಯ ಆವತಿ ಗ್ರಾಮ ಎಂದು ಇತಿಹಾಸ ಹೇಳುತ್ತದೆ. ದೇವನಹಳ್ಳಿ ವ್ಯಾಪ್ತಿಯಲ್ಲಿ 20 ಎಕರೆ ಜಾಗ ಗುರ್ತಿಸಿ ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ಸಂಸ್ಥೆ ನಿರ್ಮಾಣ ಮಾಡಲಾಗುವುದು ಎಂದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಎಲ್ಲಾ ಸಮುದಾಯದವರನ್ನು ಗೌರವದಿಂದ ಕಾಣುತ್ತಿದ್ದರು. ಬೆಂಗಳೂರಿನಲ್ಲಿ ಹಲವು ಕುಲ ಕಸುಬುಗಳನ್ನು ಪರಿಚಯಿಸಿ, ಹಲವರಿಗೆ ಉದ್ಯೋಗ ಸೃಷ್ಟಿಸಿದರು. ಬೆಂಗಳೂರು ಇಂದು ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆಗಳ ಫಲ ಎಂದು ಹಿತವಚನ ನುಡಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…