ಎಲ್ಲಾ ಸಮುದಾಯದ ಏಳಿಗೆಗೆ ಶ್ರಮಿಸಿದವರು ನಾಡಪ್ರಭು ಕೆಂಪೇಗೌಡರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

 

ಕೆರೆ, ಕುಂಟೆ, ಕೋಟೆ, ಪೇಟೆಗಳನ್ನು ನಿರ್ಮಿಸಿದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗೆ ಶ್ರಮಿಸಿದವರು. ಬೆಂಗಳೂರು ನಗರವು ವಿಶ್ವದಲ್ಲಿ ಹೆಸರು ಮಾಡಲು ಕಾರಣ ಎಂದರೆ ಅದು ಕೆಂಪೇಗೌಡರ ಕೊಡುಗೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಇಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ(ಪುತ್ಥಳಿ) ಅನಾವರಣಗೊಳಿಸಿ ಹಾಗೂ ಜಯಂತ್ಯೋತ್ಸವ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ ವಂಶಸ್ಥರ ಮೂಲ ಸ್ಥಾನ ದೇವನಹಳ್ಳಿಯ ಆವತಿ ಗ್ರಾಮ ಎಂದು ಇತಿಹಾಸ ಹೇಳುತ್ತದೆ. ದೇವನಹಳ್ಳಿ ವ್ಯಾಪ್ತಿಯಲ್ಲಿ 20 ಎಕರೆ ಜಾಗ ಗುರ್ತಿಸಿ ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ಸಂಸ್ಥೆ ನಿರ್ಮಾಣ ಮಾಡಲಾಗುವುದು ಎಂದರು.

ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಮಾತನಾಡಿ ಜಿಲ್ಲಾಡಳಿತ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಮಾಡಿರುವುದು ಬಹಳ ಹೆಮ್ಮೆಯ ವಿಷಯ. ಕೆಂಪೇಗೌಡರ ತತ್ವ ಸಿದ್ಧಾಂತಗಳನ್ನು, ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಎಲ್ಲಾ ಸಮುದಾಯದವರನ್ನು ಗೌರವದಿಂದ ಕಾಣುತ್ತಿದ್ದರು. ಬೆಂಗಳೂರಿನಲ್ಲಿ ಹಲವು ಕುಲ ಕಸುಬುಗಳನ್ನು ಪರಿಚಯಿಸಿ, ಹಲವರಿಗೆ ಉದ್ಯೋಗ ಸೃಷ್ಟಿಸಿದರು. ಬೆಂಗಳೂರು ಇಂದು ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆಗಳ ಫಲ ಎಂದು ಹಿತವಚನ ನುಡಿದರು.

ಕಾರ್ಯಕ್ರಮದಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ.ಕೆ.ಎನ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ, ಉಪ ವಿಭಾಗಾಧಿಕಾರಿ ಶ್ರೀನಿವಾಸ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಸಮುದಾಯದ ಮುಖಂಡರಾದ ಕೆ.ಸಿ ವೆಂಕಟೇಗೌಡ, ಬಿ.ಮುನೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago