ಕೆರೆ, ಕುಂಟೆ, ಕೋಟೆ, ಪೇಟೆಗಳನ್ನು ನಿರ್ಮಿಸಿದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗೆ ಶ್ರಮಿಸಿದವರು. ಬೆಂಗಳೂರು ನಗರವು ವಿಶ್ವದಲ್ಲಿ ಹೆಸರು ಮಾಡಲು ಕಾರಣ ಎಂದರೆ ಅದು ಕೆಂಪೇಗೌಡರ ಕೊಡುಗೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಇಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ(ಪುತ್ಥಳಿ) ಅನಾವರಣಗೊಳಿಸಿ ಹಾಗೂ ಜಯಂತ್ಯೋತ್ಸವ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರ ವಂಶಸ್ಥರ ಮೂಲ ಸ್ಥಾನ ದೇವನಹಳ್ಳಿಯ ಆವತಿ ಗ್ರಾಮ ಎಂದು ಇತಿಹಾಸ ಹೇಳುತ್ತದೆ. ದೇವನಹಳ್ಳಿ ವ್ಯಾಪ್ತಿಯಲ್ಲಿ 20 ಎಕರೆ ಜಾಗ ಗುರ್ತಿಸಿ ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ಸಂಸ್ಥೆ ನಿರ್ಮಾಣ ಮಾಡಲಾಗುವುದು ಎಂದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಎಲ್ಲಾ ಸಮುದಾಯದವರನ್ನು ಗೌರವದಿಂದ ಕಾಣುತ್ತಿದ್ದರು. ಬೆಂಗಳೂರಿನಲ್ಲಿ ಹಲವು ಕುಲ ಕಸುಬುಗಳನ್ನು ಪರಿಚಯಿಸಿ, ಹಲವರಿಗೆ ಉದ್ಯೋಗ ಸೃಷ್ಟಿಸಿದರು. ಬೆಂಗಳೂರು ಇಂದು ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆಗಳ ಫಲ ಎಂದು ಹಿತವಚನ ನುಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…