Categories: ರಾಜ್ಯ

‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’- ಸಿಎಂ ಸಿದ್ದರಾಮಯ್ಯ

ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು ಇಂದು ಗೂಳಿಹಟ್ಟಿ ಶೇಖರ್ ಅವರಿಗಾದ ಅವಮಾನದ ಹೊಣೆ ಹೊರುವರೇ? ಇದೇ ಕಾರಣಕ್ಕೆ ನಾನು ಹಿಂದೆ ನೂರು ಬಾರಿ ಹೇಳಿದ್ದೇನೆ, ಈಗ ಮತ್ತೆ ಹೇಳುತ್ತೇನೆ ‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’. ಜಾತೀಯತೆಯನ್ನು ತೊಡೆದು ಹಾಕಲು ಮೀಸಲಾತಿಯೂ ಒಂದು ಪ್ರಬಲ ಅಸ್ತ್ರ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ ಎಂದಿದ್ದಾರೆ.

ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ‌ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ ಎಂದು‌ ತಿಳಿಸಿದ್ದಾರೆ.

ಆರ್.ಎಸ್.ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ.  ಈ ವರೆಗೆ ಒಬ್ಬನೇ ಒಬ್ಬ ತಳ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್.ಎಸ್.ಎಸ್ ತನ್ನ ‌ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು. ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? ಎಂದು ಪ್ರಶ್ನಿಸಿದ್ದಾರೆ.

‘ಹಿಂದುಗಳೆಲ್ಲ ಒಂದು’ ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ‌ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ “ಹಿಂದೂ..ಒಂದು” ಎಂದು ಸುಳ್ಳುಹೇಳಿ ಜನರನ್ನು ನಂಬಿಸಿ‌ ಮೋಸಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ತನ್ನ ‘ಹೊಡಿ ಬಡಿ’ ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಚವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು‌ ನೀಡುವ ಸಮಯ ಬಂದಾಗ ಮನೆ ಗೇಟ್‌ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು‌ ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

8 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

20 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

23 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago