Categories: ರಾಜ್ಯ

‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’- ಸಿಎಂ ಸಿದ್ದರಾಮಯ್ಯ

ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು ಇಂದು ಗೂಳಿಹಟ್ಟಿ ಶೇಖರ್ ಅವರಿಗಾದ ಅವಮಾನದ ಹೊಣೆ ಹೊರುವರೇ? ಇದೇ ಕಾರಣಕ್ಕೆ ನಾನು ಹಿಂದೆ ನೂರು ಬಾರಿ ಹೇಳಿದ್ದೇನೆ, ಈಗ ಮತ್ತೆ ಹೇಳುತ್ತೇನೆ ‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’. ಜಾತೀಯತೆಯನ್ನು ತೊಡೆದು ಹಾಕಲು ಮೀಸಲಾತಿಯೂ ಒಂದು ಪ್ರಬಲ ಅಸ್ತ್ರ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ ಎಂದಿದ್ದಾರೆ.

ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ‌ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ ಎಂದು‌ ತಿಳಿಸಿದ್ದಾರೆ.

ಆರ್.ಎಸ್.ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ.  ಈ ವರೆಗೆ ಒಬ್ಬನೇ ಒಬ್ಬ ತಳ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್.ಎಸ್.ಎಸ್ ತನ್ನ ‌ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು. ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? ಎಂದು ಪ್ರಶ್ನಿಸಿದ್ದಾರೆ.

‘ಹಿಂದುಗಳೆಲ್ಲ ಒಂದು’ ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ‌ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ “ಹಿಂದೂ..ಒಂದು” ಎಂದು ಸುಳ್ಳುಹೇಳಿ ಜನರನ್ನು ನಂಬಿಸಿ‌ ಮೋಸಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ತನ್ನ ‘ಹೊಡಿ ಬಡಿ’ ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಚವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು‌ ನೀಡುವ ಸಮಯ ಬಂದಾಗ ಮನೆ ಗೇಟ್‌ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು‌ ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago