ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳಿಂದ ಪ್ರತಿನಿತ್ಯ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಾರಿಗೆ ಇಲಾಖೆ ಯಾವ ಕ್ರಮಕೈಗೊಳ್ಳದೆ ಕಣ್ಣುತೆರೆದು ಹಗಲು ನಿದ್ದೆ ಮಾಡುತ್ತಿದೆ.
ಉಜ್ಜನಿ ಹೊಸಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ವಾರಕ್ಕೊಮ್ಮೆ ತಾಂತ್ರಿಕ ಸಮಸ್ಯೆಗಳಿಂದ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತವೆ. ಅದೇರೀತಿ ಇಂದು ಸಂಜೆ ದೊಡ್ಡಬಳ್ಳಾಪುರದಿಂದ ಉಜ್ಜನಿ- ಹೊಸಹಳ್ಳಿಗೆ ತೆರಳುತ್ತಿದ್ದ ಬಸ್ ದೊಡ್ಡಹಳ್ಳ ಸಮೀಪ ಕೆಟ್ಟುನಿಂತಿದೆ. ಇದರಿಂದ ಪ್ರಯಾಣಿಕರು ಇತ್ತ ಮನೆಗೂ ಹೋಗದೇ, ಅತ್ತ ವಾಪಸ್ ದೊಡ್ಡಬಳ್ಳಾಪುರಕ್ಕೂ ಬರದೇ ದಟ್ಟ ಅರಣ್ಯ ಪ್ರದೇಶದಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದಿಂದ ಸುಮಾರು 20-30ಕಿಲೋ ಮೀಟರ್ ದೂರದ ಗ್ರಾಮಗಳಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು, ರೋಗಿಗಳು ಬೆಂಗಳೂರು, ದೊಡ್ಡಬಳ್ಳಾಪುರ ಸೇರಿದಂತೆ ಇತರೆ ಕಡೆಗಳಿಗೆ ಸಂಚಾರ ಮಾಡುತ್ತಾರೆ. ಈ ಕುಗ್ರಾಮಗಳಿಗೆ ಬೆಳಗ್ಗೆ, ಸಂಜೆ ಮಾತ್ರ ಬಸ್ ವ್ಯವಸ್ಥೆ ಇರುತ್ತವೆ. ಈ ಬಸ್ ಗಳು ಅರ್ಧ ದಾರಿಯಲ್ಲೇ ತಾಂತ್ರಿಕ ದೋಷಗಳಿಂದ ಮುಂದಕ್ಕು ಹೋಗಲ್ಲ, ಹಿಂದಕ್ಕೂ ಬರಲ್ಲ. ಒಂದು ದಿನ ಸ್ಟೇರಿಂಗ್ ಕಟ್ಟಾಗುತ್ತದೆ. ಪಂಚರ್ ಆಗುತ್ತದೆ. ಡೀಸೆಲ್ ಪಂಪ್ ಆಗಲ್ಲ, ಇಂಜಿನ್ ಹೀಟ್ ಸೇರಿದಂತೆ ಇತರೆ ಸಮಸ್ಯೆಗಳಿಂದ ಬಸ್ ಸಂಚಾರ ಮಾಡದೇ ನಿಲ್ಲುತ್ತವೆ ಎಂದು ದೂರಿದ್ದಾರೆ.
ರಿಮೋಟ್ ಊರುಗಳಿಗೆ ಹಾಳಾದ ಬಸ್, ಹಳೇ ಬಸ್, ಟೆಸ್ಟಿಂಗ್ ಬಸ್ಸುಗಳನ್ನು ಹಾಕುತ್ತಾರೆ. ಈ ಕುರಿತು ಡಿಪೋ ಮ್ಯಾನೇಜರ್ ಗಮನಕ್ಕೆ ತಂದರೆ ಹಾರಿಕೆ ಉತ್ತರ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.
ಸಾರಿಗೆ ಇಲಾಖಾಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…