ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳು: ಪ್ರಯಾಣಿಕರಿಗೆ ತಪ್ಪದ ಪರದಾಟ: ಕ್ಯಾರೆ ಎನ್ನದ ಸಾರಿಗೆ ಡಿಪಾರ್ಟ್ ಮೆಂಟ್

ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳಿಂದ ಪ್ರತಿನಿತ್ಯ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಾರಿಗೆ ಇಲಾಖೆ ಯಾವ ಕ್ರಮಕೈಗೊಳ್ಳದೆ ಕಣ್ಣುತೆರೆದು ಹಗಲು ನಿದ್ದೆ ಮಾಡುತ್ತಿದೆ.

ಉಜ್ಜನಿ ಹೊಸಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ವಾರಕ್ಕೊಮ್ಮೆ ತಾಂತ್ರಿಕ ಸಮಸ್ಯೆಗಳಿಂದ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತವೆ. ಅದೇರೀತಿ ಇಂದು ಸಂಜೆ ದೊಡ್ಡಬಳ್ಳಾಪುರದಿಂದ ಉಜ್ಜನಿ- ಹೊಸಹಳ್ಳಿಗೆ ತೆರಳುತ್ತಿದ್ದ ಬಸ್ ದೊಡ್ಡಹಳ್ಳ ಸಮೀಪ ಕೆಟ್ಟುನಿಂತಿದೆ. ಇದರಿಂದ ಪ್ರಯಾಣಿಕರು ಇತ್ತ‌ ಮನೆಗೂ ಹೋಗದೇ, ಅತ್ತ ವಾಪಸ್ ದೊಡ್ಡಬಳ್ಳಾಪುರಕ್ಕೂ ಬರದೇ ದಟ್ಟ ಅರಣ್ಯ ಪ್ರದೇಶದಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರದಿಂದ ಸುಮಾರು 20-30ಕಿಲೋ ಮೀಟರ್ ದೂರದ ಗ್ರಾಮಗಳಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು, ರೋಗಿಗಳು ಬೆಂಗಳೂರು, ದೊಡ್ಡಬಳ್ಳಾಪುರ ಸೇರಿದಂತೆ ಇತರೆ ಕಡೆಗಳಿಗೆ ಸಂಚಾರ ಮಾಡುತ್ತಾರೆ. ಈ ಕುಗ್ರಾಮಗಳಿಗೆ ಬೆಳಗ್ಗೆ, ಸಂಜೆ ಮಾತ್ರ ಬಸ್ ವ್ಯವಸ್ಥೆ ಇರುತ್ತವೆ. ಈ ಬಸ್ ಗಳು ಅರ್ಧ ದಾರಿಯಲ್ಲೇ ತಾಂತ್ರಿಕ ದೋಷಗಳಿಂದ ಮುಂದಕ್ಕು ಹೋಗಲ್ಲ,‌ ಹಿಂದಕ್ಕೂ ಬರಲ್ಲ. ಒಂದು ದಿನ ಸ್ಟೇರಿಂಗ್ ಕಟ್ಟಾಗುತ್ತದೆ. ಪಂಚರ್ ಆಗುತ್ತದೆ. ಡೀಸೆಲ್ ಪಂಪ್ ಆಗಲ್ಲ, ಇಂಜಿನ್ ಹೀಟ್ ಸೇರಿದಂತೆ ಇತರೆ ಸಮಸ್ಯೆಗಳಿಂದ ಬಸ್ ಸಂಚಾರ ಮಾಡದೇ ನಿಲ್ಲುತ್ತವೆ ಎಂದು ದೂರಿದ್ದಾರೆ.

ರಿಮೋಟ್ ಊರುಗಳಿಗೆ ಹಾಳಾದ ಬಸ್, ಹಳೇ ಬಸ್, ಟೆಸ್ಟಿಂಗ್ ಬಸ್ಸುಗಳನ್ನು ಹಾಕುತ್ತಾರೆ.‌ ಈ ಕುರಿತು ಡಿಪೋ ಮ್ಯಾನೇಜರ್ ಗಮನಕ್ಕೆ ತಂದರೆ ಹಾರಿಕೆ ಉತ್ತರ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.

ಸಾರಿಗೆ ಇಲಾಖಾಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

2 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

4 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

10 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

10 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 day ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 day ago