ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳು: ಪ್ರಯಾಣಿಕರಿಗೆ ತಪ್ಪದ ಪರದಾಟ: ಕ್ಯಾರೆ ಎನ್ನದ ಸಾರಿಗೆ ಡಿಪಾರ್ಟ್ ಮೆಂಟ್

ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳಿಂದ ಪ್ರತಿನಿತ್ಯ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಾರಿಗೆ ಇಲಾಖೆ ಯಾವ ಕ್ರಮಕೈಗೊಳ್ಳದೆ ಕಣ್ಣುತೆರೆದು ಹಗಲು ನಿದ್ದೆ ಮಾಡುತ್ತಿದೆ.

ಉಜ್ಜನಿ ಹೊಸಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ವಾರಕ್ಕೊಮ್ಮೆ ತಾಂತ್ರಿಕ ಸಮಸ್ಯೆಗಳಿಂದ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತವೆ. ಅದೇರೀತಿ ಇಂದು ಸಂಜೆ ದೊಡ್ಡಬಳ್ಳಾಪುರದಿಂದ ಉಜ್ಜನಿ- ಹೊಸಹಳ್ಳಿಗೆ ತೆರಳುತ್ತಿದ್ದ ಬಸ್ ದೊಡ್ಡಹಳ್ಳ ಸಮೀಪ ಕೆಟ್ಟುನಿಂತಿದೆ. ಇದರಿಂದ ಪ್ರಯಾಣಿಕರು ಇತ್ತ‌ ಮನೆಗೂ ಹೋಗದೇ, ಅತ್ತ ವಾಪಸ್ ದೊಡ್ಡಬಳ್ಳಾಪುರಕ್ಕೂ ಬರದೇ ದಟ್ಟ ಅರಣ್ಯ ಪ್ರದೇಶದಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರದಿಂದ ಸುಮಾರು 20-30ಕಿಲೋ ಮೀಟರ್ ದೂರದ ಗ್ರಾಮಗಳಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು, ರೋಗಿಗಳು ಬೆಂಗಳೂರು, ದೊಡ್ಡಬಳ್ಳಾಪುರ ಸೇರಿದಂತೆ ಇತರೆ ಕಡೆಗಳಿಗೆ ಸಂಚಾರ ಮಾಡುತ್ತಾರೆ. ಈ ಕುಗ್ರಾಮಗಳಿಗೆ ಬೆಳಗ್ಗೆ, ಸಂಜೆ ಮಾತ್ರ ಬಸ್ ವ್ಯವಸ್ಥೆ ಇರುತ್ತವೆ. ಈ ಬಸ್ ಗಳು ಅರ್ಧ ದಾರಿಯಲ್ಲೇ ತಾಂತ್ರಿಕ ದೋಷಗಳಿಂದ ಮುಂದಕ್ಕು ಹೋಗಲ್ಲ,‌ ಹಿಂದಕ್ಕೂ ಬರಲ್ಲ. ಒಂದು ದಿನ ಸ್ಟೇರಿಂಗ್ ಕಟ್ಟಾಗುತ್ತದೆ. ಪಂಚರ್ ಆಗುತ್ತದೆ. ಡೀಸೆಲ್ ಪಂಪ್ ಆಗಲ್ಲ, ಇಂಜಿನ್ ಹೀಟ್ ಸೇರಿದಂತೆ ಇತರೆ ಸಮಸ್ಯೆಗಳಿಂದ ಬಸ್ ಸಂಚಾರ ಮಾಡದೇ ನಿಲ್ಲುತ್ತವೆ ಎಂದು ದೂರಿದ್ದಾರೆ.

ರಿಮೋಟ್ ಊರುಗಳಿಗೆ ಹಾಳಾದ ಬಸ್, ಹಳೇ ಬಸ್, ಟೆಸ್ಟಿಂಗ್ ಬಸ್ಸುಗಳನ್ನು ಹಾಕುತ್ತಾರೆ.‌ ಈ ಕುರಿತು ಡಿಪೋ ಮ್ಯಾನೇಜರ್ ಗಮನಕ್ಕೆ ತಂದರೆ ಹಾರಿಕೆ ಉತ್ತರ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.

ಸಾರಿಗೆ ಇಲಾಖಾಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

14 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago