ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳಿಂದ ಪ್ರತಿನಿತ್ಯ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಾರಿಗೆ ಇಲಾಖೆ ಯಾವ ಕ್ರಮಕೈಗೊಳ್ಳದೆ ಕಣ್ಣುತೆರೆದು ಹಗಲು ನಿದ್ದೆ ಮಾಡುತ್ತಿದೆ.
ಉಜ್ಜನಿ ಹೊಸಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ವಾರಕ್ಕೊಮ್ಮೆ ತಾಂತ್ರಿಕ ಸಮಸ್ಯೆಗಳಿಂದ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತವೆ. ಅದೇರೀತಿ ಇಂದು ಸಂಜೆ ದೊಡ್ಡಬಳ್ಳಾಪುರದಿಂದ ಉಜ್ಜನಿ- ಹೊಸಹಳ್ಳಿಗೆ ತೆರಳುತ್ತಿದ್ದ ಬಸ್ ದೊಡ್ಡಹಳ್ಳ ಸಮೀಪ ಕೆಟ್ಟುನಿಂತಿದೆ. ಇದರಿಂದ ಪ್ರಯಾಣಿಕರು ಇತ್ತ ಮನೆಗೂ ಹೋಗದೇ, ಅತ್ತ ವಾಪಸ್ ದೊಡ್ಡಬಳ್ಳಾಪುರಕ್ಕೂ ಬರದೇ ದಟ್ಟ ಅರಣ್ಯ ಪ್ರದೇಶದಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದಿಂದ ಸುಮಾರು 20-30ಕಿಲೋ ಮೀಟರ್ ದೂರದ ಗ್ರಾಮಗಳಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು, ರೋಗಿಗಳು ಬೆಂಗಳೂರು, ದೊಡ್ಡಬಳ್ಳಾಪುರ ಸೇರಿದಂತೆ ಇತರೆ ಕಡೆಗಳಿಗೆ ಸಂಚಾರ ಮಾಡುತ್ತಾರೆ. ಈ ಕುಗ್ರಾಮಗಳಿಗೆ ಬೆಳಗ್ಗೆ, ಸಂಜೆ ಮಾತ್ರ ಬಸ್ ವ್ಯವಸ್ಥೆ ಇರುತ್ತವೆ. ಈ ಬಸ್ ಗಳು ಅರ್ಧ ದಾರಿಯಲ್ಲೇ ತಾಂತ್ರಿಕ ದೋಷಗಳಿಂದ ಮುಂದಕ್ಕು ಹೋಗಲ್ಲ, ಹಿಂದಕ್ಕೂ ಬರಲ್ಲ. ಒಂದು ದಿನ ಸ್ಟೇರಿಂಗ್ ಕಟ್ಟಾಗುತ್ತದೆ. ಪಂಚರ್ ಆಗುತ್ತದೆ. ಡೀಸೆಲ್ ಪಂಪ್ ಆಗಲ್ಲ, ಇಂಜಿನ್ ಹೀಟ್ ಸೇರಿದಂತೆ ಇತರೆ ಸಮಸ್ಯೆಗಳಿಂದ ಬಸ್ ಸಂಚಾರ ಮಾಡದೇ ನಿಲ್ಲುತ್ತವೆ ಎಂದು ದೂರಿದ್ದಾರೆ.
ರಿಮೋಟ್ ಊರುಗಳಿಗೆ ಹಾಳಾದ ಬಸ್, ಹಳೇ ಬಸ್, ಟೆಸ್ಟಿಂಗ್ ಬಸ್ಸುಗಳನ್ನು ಹಾಕುತ್ತಾರೆ. ಈ ಕುರಿತು ಡಿಪೋ ಮ್ಯಾನೇಜರ್ ಗಮನಕ್ಕೆ ತಂದರೆ ಹಾರಿಕೆ ಉತ್ತರ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.
ಸಾರಿಗೆ ಇಲಾಖಾಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…