ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳಿಂದ ಪ್ರತಿನಿತ್ಯ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಾರಿಗೆ ಇಲಾಖೆ ಯಾವ ಕ್ರಮಕೈಗೊಳ್ಳದೆ ಕಣ್ಣುತೆರೆದು ಹಗಲು ನಿದ್ದೆ ಮಾಡುತ್ತಿದೆ.
ಉಜ್ಜನಿ ಹೊಸಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ವಾರಕ್ಕೊಮ್ಮೆ ತಾಂತ್ರಿಕ ಸಮಸ್ಯೆಗಳಿಂದ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತವೆ. ಅದೇರೀತಿ ಇಂದು ಸಂಜೆ ದೊಡ್ಡಬಳ್ಳಾಪುರದಿಂದ ಉಜ್ಜನಿ- ಹೊಸಹಳ್ಳಿಗೆ ತೆರಳುತ್ತಿದ್ದ ಬಸ್ ದೊಡ್ಡಹಳ್ಳ ಸಮೀಪ ಕೆಟ್ಟುನಿಂತಿದೆ. ಇದರಿಂದ ಪ್ರಯಾಣಿಕರು ಇತ್ತ ಮನೆಗೂ ಹೋಗದೇ, ಅತ್ತ ವಾಪಸ್ ದೊಡ್ಡಬಳ್ಳಾಪುರಕ್ಕೂ ಬರದೇ ದಟ್ಟ ಅರಣ್ಯ ಪ್ರದೇಶದಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದಿಂದ ಸುಮಾರು 20-30ಕಿಲೋ ಮೀಟರ್ ದೂರದ ಗ್ರಾಮಗಳಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು, ರೋಗಿಗಳು ಬೆಂಗಳೂರು, ದೊಡ್ಡಬಳ್ಳಾಪುರ ಸೇರಿದಂತೆ ಇತರೆ ಕಡೆಗಳಿಗೆ ಸಂಚಾರ ಮಾಡುತ್ತಾರೆ. ಈ ಕುಗ್ರಾಮಗಳಿಗೆ ಬೆಳಗ್ಗೆ, ಸಂಜೆ ಮಾತ್ರ ಬಸ್ ವ್ಯವಸ್ಥೆ ಇರುತ್ತವೆ. ಈ ಬಸ್ ಗಳು ಅರ್ಧ ದಾರಿಯಲ್ಲೇ ತಾಂತ್ರಿಕ ದೋಷಗಳಿಂದ ಮುಂದಕ್ಕು ಹೋಗಲ್ಲ, ಹಿಂದಕ್ಕೂ ಬರಲ್ಲ. ಒಂದು ದಿನ ಸ್ಟೇರಿಂಗ್ ಕಟ್ಟಾಗುತ್ತದೆ. ಪಂಚರ್ ಆಗುತ್ತದೆ. ಡೀಸೆಲ್ ಪಂಪ್ ಆಗಲ್ಲ, ಇಂಜಿನ್ ಹೀಟ್ ಸೇರಿದಂತೆ ಇತರೆ ಸಮಸ್ಯೆಗಳಿಂದ ಬಸ್ ಸಂಚಾರ ಮಾಡದೇ ನಿಲ್ಲುತ್ತವೆ ಎಂದು ದೂರಿದ್ದಾರೆ.
ರಿಮೋಟ್ ಊರುಗಳಿಗೆ ಹಾಳಾದ ಬಸ್, ಹಳೇ ಬಸ್, ಟೆಸ್ಟಿಂಗ್ ಬಸ್ಸುಗಳನ್ನು ಹಾಕುತ್ತಾರೆ. ಈ ಕುರಿತು ಡಿಪೋ ಮ್ಯಾನೇಜರ್ ಗಮನಕ್ಕೆ ತಂದರೆ ಹಾರಿಕೆ ಉತ್ತರ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.
ಸಾರಿಗೆ ಇಲಾಖಾಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…