ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳಿಂದ ಪ್ರತಿನಿತ್ಯ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಾರಿಗೆ ಇಲಾಖೆ ಯಾವ ಕ್ರಮಕೈಗೊಳ್ಳದೆ ಕಣ್ಣುತೆರೆದು ಹಗಲು ನಿದ್ದೆ ಮಾಡುತ್ತಿದೆ.
ಉಜ್ಜನಿ ಹೊಸಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ವಾರಕ್ಕೊಮ್ಮೆ ತಾಂತ್ರಿಕ ಸಮಸ್ಯೆಗಳಿಂದ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತವೆ. ಅದೇರೀತಿ ಇಂದು ಸಂಜೆ ದೊಡ್ಡಬಳ್ಳಾಪುರದಿಂದ ಉಜ್ಜನಿ- ಹೊಸಹಳ್ಳಿಗೆ ತೆರಳುತ್ತಿದ್ದ ಬಸ್ ದೊಡ್ಡಹಳ್ಳ ಸಮೀಪ ಕೆಟ್ಟುನಿಂತಿದೆ. ಇದರಿಂದ ಪ್ರಯಾಣಿಕರು ಇತ್ತ ಮನೆಗೂ ಹೋಗದೇ, ಅತ್ತ ವಾಪಸ್ ದೊಡ್ಡಬಳ್ಳಾಪುರಕ್ಕೂ ಬರದೇ ದಟ್ಟ ಅರಣ್ಯ ಪ್ರದೇಶದಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದಿಂದ ಸುಮಾರು 20-30ಕಿಲೋ ಮೀಟರ್ ದೂರದ ಗ್ರಾಮಗಳಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು, ರೋಗಿಗಳು ಬೆಂಗಳೂರು, ದೊಡ್ಡಬಳ್ಳಾಪುರ ಸೇರಿದಂತೆ ಇತರೆ ಕಡೆಗಳಿಗೆ ಸಂಚಾರ ಮಾಡುತ್ತಾರೆ. ಈ ಕುಗ್ರಾಮಗಳಿಗೆ ಬೆಳಗ್ಗೆ, ಸಂಜೆ ಮಾತ್ರ ಬಸ್ ವ್ಯವಸ್ಥೆ ಇರುತ್ತವೆ. ಈ ಬಸ್ ಗಳು ಅರ್ಧ ದಾರಿಯಲ್ಲೇ ತಾಂತ್ರಿಕ ದೋಷಗಳಿಂದ ಮುಂದಕ್ಕು ಹೋಗಲ್ಲ, ಹಿಂದಕ್ಕೂ ಬರಲ್ಲ. ಒಂದು ದಿನ ಸ್ಟೇರಿಂಗ್ ಕಟ್ಟಾಗುತ್ತದೆ. ಪಂಚರ್ ಆಗುತ್ತದೆ. ಡೀಸೆಲ್ ಪಂಪ್ ಆಗಲ್ಲ, ಇಂಜಿನ್ ಹೀಟ್ ಸೇರಿದಂತೆ ಇತರೆ ಸಮಸ್ಯೆಗಳಿಂದ ಬಸ್ ಸಂಚಾರ ಮಾಡದೇ ನಿಲ್ಲುತ್ತವೆ ಎಂದು ದೂರಿದ್ದಾರೆ.
ರಿಮೋಟ್ ಊರುಗಳಿಗೆ ಹಾಳಾದ ಬಸ್, ಹಳೇ ಬಸ್, ಟೆಸ್ಟಿಂಗ್ ಬಸ್ಸುಗಳನ್ನು ಹಾಕುತ್ತಾರೆ. ಈ ಕುರಿತು ಡಿಪೋ ಮ್ಯಾನೇಜರ್ ಗಮನಕ್ಕೆ ತಂದರೆ ಹಾರಿಕೆ ಉತ್ತರ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ.
ಸಾರಿಗೆ ಇಲಾಖಾಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…