Categories: Crime

ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11 ವರ್ಷ ದೂರವಿದ್ದ ಹೆಂಡತಿಗೆ ಈಗ ಗಂಡ ಮತ್ತೆ ಯಮಸ್ವರೂಪಿಯಾಗಿದ್ದಾನೆ. ಹಳೆಯ ಪ್ರಕರಣಕ್ಕೆ ಎವಿಡೆನ್ಸ್ ನೀಡಬೇಡ ಎಂದು ಹೆಂಡತಿ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ಓದಿ……….

ಹೌದು, ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿರುವ ಮಹಿಳೆ, ಮಹಿಳೆಯಿಂದ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ.

ಹಳೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯ ವಿರುದ್ಧ ಕೋರ್ಟ್‌ಗೆ ಎವಿಡೆನ್ಸ್‌ಗೆ ಹಾಜರಾಗದಂತೆ ಪತ್ನಿಗೆ ಬೇಡಿಕೊಂಡ್ರು ಒಪ್ಪದ ಪತ್ನಿ. ಈ ಹಿನ್ನೆಲೆ ಕೋಪಗೊಂಡ ಪತಿಯು ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ತಿವಿದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

ಚಿಕ್ಕಬಿದರಕಲ್ಲಿನ ರವಿಕಿರ್ಲೊಸ್ಕರ್ ಲೇಔಟ್ ನಿವಾಸಿ ಜಮುನಾ ಎಂಬಾಕೆಗೆ ಪತಿ ಗುರುಮೂರ್ತಿ ಚಾಕು ಇರಿದಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನೂ ಜಮುನಾ ಎಂಬಾಕೆ ಗುರುಮೂರ್ತಿಯ ಎರಡನೇ ಪತ್ನಿಯಾಗಿದ್ದು, ಕಳೆದ 10 ವರ್ಷಗಳಿಂದ ಪತಿಯನ್ನ ತೊರೆದು ಬೇರೆ ಇದ್ದು, ಈ ಸಂಬಂಧ ಪತಿ-ಪತ್ನಿ ನಡುವೆ ಕೋರ್ಟ್‌ನಲ್ಲಿ ದಾಂಪತ್ಯ ವಿವಾದ ನಡೆಯುತಿದೆ.

ಪತ್ನಿ ಜಮುನಾ ಈ ಹಿಂದೆಯೂ ಪತಿ ಗುರುಮೂರ್ತಿ ಮೇಲೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ಕೂಡ ದಾಖಲಿಸಿದ್ರು. ಈ ಸಂಬಂಧ 14 ರಂದು ಸಾಕ್ಷಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಬೇಕಿದ್ದ ಪತ್ನಿ ಜಮುನಾಗೆ ಸಾಕ್ಷಿ ಒದಗಿಸಬೇಡ ಎಂದು ಹಲವು ಬಾರಿ ಮನವಿ ಮಾಡಿದ್ದ. ಅದು ಅಲ್ಲದೆ ಬೆದರಿಕೆಯನ್ನು ಕೂಡ ಹಾಕಿದ್ದ ಎನ್ನಲಾಗಿದೆ.

ಒಂದು ವೇಳೆ ಸಾಕ್ಷಿ ಒದಗಿಸಿದ್ರೆ ಪತಿ ಗುರುಮೂರ್ತಿಗೆ ಶಿಕ್ಷೆ ಆಗುವ ಭಯದಿಂದ ಮತ್ತೊಮ್ಮೆ ಪತ್ನಿ ಜಮುನಾಳನ್ನು ಕೊಲ್ಲಲು ಯತ್ನಿಸಿದ್ದ ಎನ್ನಲಾಗಿದೆ.

ಗುರುಮೂರ್ತಿ ಈ ಹಿಂದೆ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಕೂಡ ಆಗಿದ್ದ, ಅದು ಅಲ್ಲದೆ ಕುಡಿತಕ್ಕೆ ದಾಸನಾಗಿದ್ದ. ಸದ್ಯ ಘಟನೆ ಬಳಿಕ ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ಪತ್ನಿ ಜಮುನಾಳನ್ನು ದಾಖಲಿಸಿದ್ದು, ಪವಾಡ ಸದೃಶ ರೀತಿಯಲ್ಲಿ ಪತ್ನಿ ಜಮುನಾ ಪಾರಾಗಿದ್ದಾರೆ.

ಘಟನೆ ಬಳಿಕ ಗುರುಮೂರ್ತಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಿದ್ದಾರೆ.

ಒಟ್ಟಾರೆ ಕೂಡಿ ಬಾಳಬೇಕಿದ್ದ ಜೋಡಿ ಹೀಗೆ ಹಾದಿ ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿರುವುದು ವಿಪರ್ಯಾಸ. ಹೀಗೆ ಹೆಂಡತಿ ಮೇಲೆ ಕೈ ಮಾಡುತ್ತಿರುವ ಆರೋಪಿಯನ್ನು ಪೊಲೀಸರು ಬಂಧಿಸಿ‌ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದು ನೋಡಬೇಕಿದೆ.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

8 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

8 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

8 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

9 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

12 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

15 hours ago