Categories: Crime

ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11 ವರ್ಷ ದೂರವಿದ್ದ ಹೆಂಡತಿಗೆ ಈಗ ಗಂಡ ಮತ್ತೆ ಯಮಸ್ವರೂಪಿಯಾಗಿದ್ದಾನೆ. ಹಳೆಯ ಪ್ರಕರಣಕ್ಕೆ ಎವಿಡೆನ್ಸ್ ನೀಡಬೇಡ ಎಂದು ಹೆಂಡತಿ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ಓದಿ……….

ಹೌದು, ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿರುವ ಮಹಿಳೆ, ಮಹಿಳೆಯಿಂದ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ.

ಹಳೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯ ವಿರುದ್ಧ ಕೋರ್ಟ್‌ಗೆ ಎವಿಡೆನ್ಸ್‌ಗೆ ಹಾಜರಾಗದಂತೆ ಪತ್ನಿಗೆ ಬೇಡಿಕೊಂಡ್ರು ಒಪ್ಪದ ಪತ್ನಿ. ಈ ಹಿನ್ನೆಲೆ ಕೋಪಗೊಂಡ ಪತಿಯು ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ತಿವಿದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

ಚಿಕ್ಕಬಿದರಕಲ್ಲಿನ ರವಿಕಿರ್ಲೊಸ್ಕರ್ ಲೇಔಟ್ ನಿವಾಸಿ ಜಮುನಾ ಎಂಬಾಕೆಗೆ ಪತಿ ಗುರುಮೂರ್ತಿ ಚಾಕು ಇರಿದಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನೂ ಜಮುನಾ ಎಂಬಾಕೆ ಗುರುಮೂರ್ತಿಯ ಎರಡನೇ ಪತ್ನಿಯಾಗಿದ್ದು, ಕಳೆದ 10 ವರ್ಷಗಳಿಂದ ಪತಿಯನ್ನ ತೊರೆದು ಬೇರೆ ಇದ್ದು, ಈ ಸಂಬಂಧ ಪತಿ-ಪತ್ನಿ ನಡುವೆ ಕೋರ್ಟ್‌ನಲ್ಲಿ ದಾಂಪತ್ಯ ವಿವಾದ ನಡೆಯುತಿದೆ.

ಪತ್ನಿ ಜಮುನಾ ಈ ಹಿಂದೆಯೂ ಪತಿ ಗುರುಮೂರ್ತಿ ಮೇಲೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ಕೂಡ ದಾಖಲಿಸಿದ್ರು. ಈ ಸಂಬಂಧ 14 ರಂದು ಸಾಕ್ಷಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಬೇಕಿದ್ದ ಪತ್ನಿ ಜಮುನಾಗೆ ಸಾಕ್ಷಿ ಒದಗಿಸಬೇಡ ಎಂದು ಹಲವು ಬಾರಿ ಮನವಿ ಮಾಡಿದ್ದ. ಅದು ಅಲ್ಲದೆ ಬೆದರಿಕೆಯನ್ನು ಕೂಡ ಹಾಕಿದ್ದ ಎನ್ನಲಾಗಿದೆ.

ಒಂದು ವೇಳೆ ಸಾಕ್ಷಿ ಒದಗಿಸಿದ್ರೆ ಪತಿ ಗುರುಮೂರ್ತಿಗೆ ಶಿಕ್ಷೆ ಆಗುವ ಭಯದಿಂದ ಮತ್ತೊಮ್ಮೆ ಪತ್ನಿ ಜಮುನಾಳನ್ನು ಕೊಲ್ಲಲು ಯತ್ನಿಸಿದ್ದ ಎನ್ನಲಾಗಿದೆ.

ಗುರುಮೂರ್ತಿ ಈ ಹಿಂದೆ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಕೂಡ ಆಗಿದ್ದ, ಅದು ಅಲ್ಲದೆ ಕುಡಿತಕ್ಕೆ ದಾಸನಾಗಿದ್ದ. ಸದ್ಯ ಘಟನೆ ಬಳಿಕ ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ಪತ್ನಿ ಜಮುನಾಳನ್ನು ದಾಖಲಿಸಿದ್ದು, ಪವಾಡ ಸದೃಶ ರೀತಿಯಲ್ಲಿ ಪತ್ನಿ ಜಮುನಾ ಪಾರಾಗಿದ್ದಾರೆ.

ಘಟನೆ ಬಳಿಕ ಗುರುಮೂರ್ತಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಿದ್ದಾರೆ.

ಒಟ್ಟಾರೆ ಕೂಡಿ ಬಾಳಬೇಕಿದ್ದ ಜೋಡಿ ಹೀಗೆ ಹಾದಿ ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿರುವುದು ವಿಪರ್ಯಾಸ. ಹೀಗೆ ಹೆಂಡತಿ ಮೇಲೆ ಕೈ ಮಾಡುತ್ತಿರುವ ಆರೋಪಿಯನ್ನು ಪೊಲೀಸರು ಬಂಧಿಸಿ‌ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

5 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

6 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

7 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

9 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

16 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

16 hours ago