Categories: Crime

ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11 ವರ್ಷ ದೂರವಿದ್ದ ಹೆಂಡತಿಗೆ ಈಗ ಗಂಡ ಮತ್ತೆ ಯಮಸ್ವರೂಪಿಯಾಗಿದ್ದಾನೆ. ಹಳೆಯ ಪ್ರಕರಣಕ್ಕೆ ಎವಿಡೆನ್ಸ್ ನೀಡಬೇಡ ಎಂದು ಹೆಂಡತಿ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ಓದಿ……….

ಹೌದು, ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿರುವ ಮಹಿಳೆ, ಮಹಿಳೆಯಿಂದ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ.

ಹಳೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯ ವಿರುದ್ಧ ಕೋರ್ಟ್‌ಗೆ ಎವಿಡೆನ್ಸ್‌ಗೆ ಹಾಜರಾಗದಂತೆ ಪತ್ನಿಗೆ ಬೇಡಿಕೊಂಡ್ರು ಒಪ್ಪದ ಪತ್ನಿ. ಈ ಹಿನ್ನೆಲೆ ಕೋಪಗೊಂಡ ಪತಿಯು ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ತಿವಿದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

ಚಿಕ್ಕಬಿದರಕಲ್ಲಿನ ರವಿಕಿರ್ಲೊಸ್ಕರ್ ಲೇಔಟ್ ನಿವಾಸಿ ಜಮುನಾ ಎಂಬಾಕೆಗೆ ಪತಿ ಗುರುಮೂರ್ತಿ ಚಾಕು ಇರಿದಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನೂ ಜಮುನಾ ಎಂಬಾಕೆ ಗುರುಮೂರ್ತಿಯ ಎರಡನೇ ಪತ್ನಿಯಾಗಿದ್ದು, ಕಳೆದ 10 ವರ್ಷಗಳಿಂದ ಪತಿಯನ್ನ ತೊರೆದು ಬೇರೆ ಇದ್ದು, ಈ ಸಂಬಂಧ ಪತಿ-ಪತ್ನಿ ನಡುವೆ ಕೋರ್ಟ್‌ನಲ್ಲಿ ದಾಂಪತ್ಯ ವಿವಾದ ನಡೆಯುತಿದೆ.

ಪತ್ನಿ ಜಮುನಾ ಈ ಹಿಂದೆಯೂ ಪತಿ ಗುರುಮೂರ್ತಿ ಮೇಲೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ಕೂಡ ದಾಖಲಿಸಿದ್ರು. ಈ ಸಂಬಂಧ 14 ರಂದು ಸಾಕ್ಷಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಬೇಕಿದ್ದ ಪತ್ನಿ ಜಮುನಾಗೆ ಸಾಕ್ಷಿ ಒದಗಿಸಬೇಡ ಎಂದು ಹಲವು ಬಾರಿ ಮನವಿ ಮಾಡಿದ್ದ. ಅದು ಅಲ್ಲದೆ ಬೆದರಿಕೆಯನ್ನು ಕೂಡ ಹಾಕಿದ್ದ ಎನ್ನಲಾಗಿದೆ.

ಒಂದು ವೇಳೆ ಸಾಕ್ಷಿ ಒದಗಿಸಿದ್ರೆ ಪತಿ ಗುರುಮೂರ್ತಿಗೆ ಶಿಕ್ಷೆ ಆಗುವ ಭಯದಿಂದ ಮತ್ತೊಮ್ಮೆ ಪತ್ನಿ ಜಮುನಾಳನ್ನು ಕೊಲ್ಲಲು ಯತ್ನಿಸಿದ್ದ ಎನ್ನಲಾಗಿದೆ.

ಗುರುಮೂರ್ತಿ ಈ ಹಿಂದೆ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಕೂಡ ಆಗಿದ್ದ, ಅದು ಅಲ್ಲದೆ ಕುಡಿತಕ್ಕೆ ದಾಸನಾಗಿದ್ದ. ಸದ್ಯ ಘಟನೆ ಬಳಿಕ ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ಪತ್ನಿ ಜಮುನಾಳನ್ನು ದಾಖಲಿಸಿದ್ದು, ಪವಾಡ ಸದೃಶ ರೀತಿಯಲ್ಲಿ ಪತ್ನಿ ಜಮುನಾ ಪಾರಾಗಿದ್ದಾರೆ.

ಘಟನೆ ಬಳಿಕ ಗುರುಮೂರ್ತಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಿದ್ದಾರೆ.

ಒಟ್ಟಾರೆ ಕೂಡಿ ಬಾಳಬೇಕಿದ್ದ ಜೋಡಿ ಹೀಗೆ ಹಾದಿ ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿರುವುದು ವಿಪರ್ಯಾಸ. ಹೀಗೆ ಹೆಂಡತಿ ಮೇಲೆ ಕೈ ಮಾಡುತ್ತಿರುವ ಆರೋಪಿಯನ್ನು ಪೊಲೀಸರು ಬಂಧಿಸಿ‌ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

  ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು.…

41 minutes ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

3 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

4 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

17 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

18 hours ago