Categories: Crime

ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11 ವರ್ಷ ದೂರವಿದ್ದ ಹೆಂಡತಿಗೆ ಈಗ ಗಂಡ ಮತ್ತೆ ಯಮಸ್ವರೂಪಿಯಾಗಿದ್ದಾನೆ. ಹಳೆಯ ಪ್ರಕರಣಕ್ಕೆ ಎವಿಡೆನ್ಸ್ ನೀಡಬೇಡ ಎಂದು ಹೆಂಡತಿ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ಓದಿ……….

ಹೌದು, ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿರುವ ಮಹಿಳೆ, ಮಹಿಳೆಯಿಂದ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ.

ಹಳೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯ ವಿರುದ್ಧ ಕೋರ್ಟ್‌ಗೆ ಎವಿಡೆನ್ಸ್‌ಗೆ ಹಾಜರಾಗದಂತೆ ಪತ್ನಿಗೆ ಬೇಡಿಕೊಂಡ್ರು ಒಪ್ಪದ ಪತ್ನಿ. ಈ ಹಿನ್ನೆಲೆ ಕೋಪಗೊಂಡ ಪತಿಯು ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ತಿವಿದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

ಚಿಕ್ಕಬಿದರಕಲ್ಲಿನ ರವಿಕಿರ್ಲೊಸ್ಕರ್ ಲೇಔಟ್ ನಿವಾಸಿ ಜಮುನಾ ಎಂಬಾಕೆಗೆ ಪತಿ ಗುರುಮೂರ್ತಿ ಚಾಕು ಇರಿದಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನೂ ಜಮುನಾ ಎಂಬಾಕೆ ಗುರುಮೂರ್ತಿಯ ಎರಡನೇ ಪತ್ನಿಯಾಗಿದ್ದು, ಕಳೆದ 10 ವರ್ಷಗಳಿಂದ ಪತಿಯನ್ನ ತೊರೆದು ಬೇರೆ ಇದ್ದು, ಈ ಸಂಬಂಧ ಪತಿ-ಪತ್ನಿ ನಡುವೆ ಕೋರ್ಟ್‌ನಲ್ಲಿ ದಾಂಪತ್ಯ ವಿವಾದ ನಡೆಯುತಿದೆ.

ಪತ್ನಿ ಜಮುನಾ ಈ ಹಿಂದೆಯೂ ಪತಿ ಗುರುಮೂರ್ತಿ ಮೇಲೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ಕೂಡ ದಾಖಲಿಸಿದ್ರು. ಈ ಸಂಬಂಧ 14 ರಂದು ಸಾಕ್ಷಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಬೇಕಿದ್ದ ಪತ್ನಿ ಜಮುನಾಗೆ ಸಾಕ್ಷಿ ಒದಗಿಸಬೇಡ ಎಂದು ಹಲವು ಬಾರಿ ಮನವಿ ಮಾಡಿದ್ದ. ಅದು ಅಲ್ಲದೆ ಬೆದರಿಕೆಯನ್ನು ಕೂಡ ಹಾಕಿದ್ದ ಎನ್ನಲಾಗಿದೆ.

ಒಂದು ವೇಳೆ ಸಾಕ್ಷಿ ಒದಗಿಸಿದ್ರೆ ಪತಿ ಗುರುಮೂರ್ತಿಗೆ ಶಿಕ್ಷೆ ಆಗುವ ಭಯದಿಂದ ಮತ್ತೊಮ್ಮೆ ಪತ್ನಿ ಜಮುನಾಳನ್ನು ಕೊಲ್ಲಲು ಯತ್ನಿಸಿದ್ದ ಎನ್ನಲಾಗಿದೆ.

ಗುರುಮೂರ್ತಿ ಈ ಹಿಂದೆ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಕೂಡ ಆಗಿದ್ದ, ಅದು ಅಲ್ಲದೆ ಕುಡಿತಕ್ಕೆ ದಾಸನಾಗಿದ್ದ. ಸದ್ಯ ಘಟನೆ ಬಳಿಕ ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ಪತ್ನಿ ಜಮುನಾಳನ್ನು ದಾಖಲಿಸಿದ್ದು, ಪವಾಡ ಸದೃಶ ರೀತಿಯಲ್ಲಿ ಪತ್ನಿ ಜಮುನಾ ಪಾರಾಗಿದ್ದಾರೆ.

ಘಟನೆ ಬಳಿಕ ಗುರುಮೂರ್ತಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಿದ್ದಾರೆ.

ಒಟ್ಟಾರೆ ಕೂಡಿ ಬಾಳಬೇಕಿದ್ದ ಜೋಡಿ ಹೀಗೆ ಹಾದಿ ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿರುವುದು ವಿಪರ್ಯಾಸ. ಹೀಗೆ ಹೆಂಡತಿ ಮೇಲೆ ಕೈ ಮಾಡುತ್ತಿರುವ ಆರೋಪಿಯನ್ನು ಪೊಲೀಸರು ಬಂಧಿಸಿ‌ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

16 minutes ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

32 minutes ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

3 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

11 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

13 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

24 hours ago