Categories: Crime

ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11 ವರ್ಷ ದೂರವಿದ್ದ ಹೆಂಡತಿಗೆ ಈಗ ಗಂಡ ಮತ್ತೆ ಯಮಸ್ವರೂಪಿಯಾಗಿದ್ದಾನೆ. ಹಳೆಯ ಪ್ರಕರಣಕ್ಕೆ ಎವಿಡೆನ್ಸ್ ನೀಡಬೇಡ ಎಂದು ಹೆಂಡತಿ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ಓದಿ……….

ಹೌದು, ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿರುವ ಮಹಿಳೆ, ಮಹಿಳೆಯಿಂದ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ.

ಹಳೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯ ವಿರುದ್ಧ ಕೋರ್ಟ್‌ಗೆ ಎವಿಡೆನ್ಸ್‌ಗೆ ಹಾಜರಾಗದಂತೆ ಪತ್ನಿಗೆ ಬೇಡಿಕೊಂಡ್ರು ಒಪ್ಪದ ಪತ್ನಿ. ಈ ಹಿನ್ನೆಲೆ ಕೋಪಗೊಂಡ ಪತಿಯು ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ತಿವಿದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

ಚಿಕ್ಕಬಿದರಕಲ್ಲಿನ ರವಿಕಿರ್ಲೊಸ್ಕರ್ ಲೇಔಟ್ ನಿವಾಸಿ ಜಮುನಾ ಎಂಬಾಕೆಗೆ ಪತಿ ಗುರುಮೂರ್ತಿ ಚಾಕು ಇರಿದಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನೂ ಜಮುನಾ ಎಂಬಾಕೆ ಗುರುಮೂರ್ತಿಯ ಎರಡನೇ ಪತ್ನಿಯಾಗಿದ್ದು, ಕಳೆದ 10 ವರ್ಷಗಳಿಂದ ಪತಿಯನ್ನ ತೊರೆದು ಬೇರೆ ಇದ್ದು, ಈ ಸಂಬಂಧ ಪತಿ-ಪತ್ನಿ ನಡುವೆ ಕೋರ್ಟ್‌ನಲ್ಲಿ ದಾಂಪತ್ಯ ವಿವಾದ ನಡೆಯುತಿದೆ.

ಪತ್ನಿ ಜಮುನಾ ಈ ಹಿಂದೆಯೂ ಪತಿ ಗುರುಮೂರ್ತಿ ಮೇಲೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ಕೂಡ ದಾಖಲಿಸಿದ್ರು. ಈ ಸಂಬಂಧ 14 ರಂದು ಸಾಕ್ಷಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಬೇಕಿದ್ದ ಪತ್ನಿ ಜಮುನಾಗೆ ಸಾಕ್ಷಿ ಒದಗಿಸಬೇಡ ಎಂದು ಹಲವು ಬಾರಿ ಮನವಿ ಮಾಡಿದ್ದ. ಅದು ಅಲ್ಲದೆ ಬೆದರಿಕೆಯನ್ನು ಕೂಡ ಹಾಕಿದ್ದ ಎನ್ನಲಾಗಿದೆ.

ಒಂದು ವೇಳೆ ಸಾಕ್ಷಿ ಒದಗಿಸಿದ್ರೆ ಪತಿ ಗುರುಮೂರ್ತಿಗೆ ಶಿಕ್ಷೆ ಆಗುವ ಭಯದಿಂದ ಮತ್ತೊಮ್ಮೆ ಪತ್ನಿ ಜಮುನಾಳನ್ನು ಕೊಲ್ಲಲು ಯತ್ನಿಸಿದ್ದ ಎನ್ನಲಾಗಿದೆ.

ಗುರುಮೂರ್ತಿ ಈ ಹಿಂದೆ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಕೂಡ ಆಗಿದ್ದ, ಅದು ಅಲ್ಲದೆ ಕುಡಿತಕ್ಕೆ ದಾಸನಾಗಿದ್ದ. ಸದ್ಯ ಘಟನೆ ಬಳಿಕ ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ಪತ್ನಿ ಜಮುನಾಳನ್ನು ದಾಖಲಿಸಿದ್ದು, ಪವಾಡ ಸದೃಶ ರೀತಿಯಲ್ಲಿ ಪತ್ನಿ ಜಮುನಾ ಪಾರಾಗಿದ್ದಾರೆ.

ಘಟನೆ ಬಳಿಕ ಗುರುಮೂರ್ತಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಿದ್ದಾರೆ.

ಒಟ್ಟಾರೆ ಕೂಡಿ ಬಾಳಬೇಕಿದ್ದ ಜೋಡಿ ಹೀಗೆ ಹಾದಿ ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿರುವುದು ವಿಪರ್ಯಾಸ. ಹೀಗೆ ಹೆಂಡತಿ ಮೇಲೆ ಕೈ ಮಾಡುತ್ತಿರುವ ಆರೋಪಿಯನ್ನು ಪೊಲೀಸರು ಬಂಧಿಸಿ‌ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

53 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago