Categories: ಲೇಖನ

ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ……

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,

ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌……

ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ.
ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ…..

ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ.
ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ……

ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ,
ದೇವ ಮಂದಿರ ಮಠ ಮಾನ್ಯಗಳು ಭಾವನೆಗಳನ್ನು ನಿಯಂತ್ರಿಸುತ್ತವೆ……

ಐತಿಹಾಸಿಕ ಮತ್ತು ಪೌರಾಣಿಕ ಘಟನೆಗಳು ಕುತೂಹಲ ಮೂಡಿಸುತ್ತದೆ,
ಪ್ರಸ್ತುತ ರಾಜಕೀಯ ಮತ್ತು ಹಿಂಸಾತ್ಮಕ ಘಟನೆಗಳು ಅಸಹ್ಯ ಮತ್ತು ಬೇಸರ ಮೂಡಿಸುತ್ತದೆ…..

ಪ್ರಕೃತಿಯೊಂದಿಗಿನ ಒಡನಾಟ ಜೀವನೋತ್ಸಾಹ ಹೆಚ್ಚಿಸುತ್ತದೆ.
ಆಧುನಿಕ ತಂತ್ರಜ್ಞಾನದ ಒಡನಾಟ ಜೀವನದ ಬಗ್ಗೆ ಜಿಗುಪ್ಸೆ ಹೆಚ್ಚಿಸುತ್ತದೆ……

ಪ್ರಶ್ನಿಸುವ ಮನೋಭಾವ ಮನಸ್ಸನ್ನು ವಿಶಾಲಗೊಳಿಸಿ ಸದಾ ಜಾಗೃತವಾಗಿಟ್ಟಿರುತ್ತದೆ.
ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಮನಸ್ಸನ್ನು ಸಂಕುಚಿತಗೊಳಿಸಿ ಅರಿವಿನ ಮಟ್ಟವನ್ನು ಕುಗ್ಗಿಸುತ್ತದೆ……

ದ್ವೇಷ, ಅಸೂಯೆ, ಅಹಂಕಾರ, ಪ್ರತಿಕಾರಗಳು ಸಂಬಂಧಗಳನ್ನು ನಾಶಪಡಿಸುತ್ತದೆ.
ಪ್ರೀತಿ, ಸಹಕಾರ, ತ್ಯಾಗ, ತಾಳ್ಮೆ ಸಂಬಂಧಗಳನ್ನು ಬೆಳೆಸುತ್ತವೆ……

ಈ ಎಲ್ಲಾ ಆಯ್ಕೆಗಳು ಬಹುತೇಕ ನಮ್ಮ ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ.
ಅನಿವಾರ್ಯತೆ ಹೊರತುಪಡಿಸಿ
ನಾವು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುತ್ತೇವೆ ಎಂಬುದರ ಮೇಲೆ ಬದುಕಿನ ಘನತೆ ನಿರ್ಧರಿಸಲ್ಪಡುತ್ತದೆ……

ಆಯ್ಕೆಗೆ ಮುನ್ನ ದಯವಿಟ್ಟು ಯೋಚಿಸಿ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

3 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

4 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

5 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

5 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

9 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

16 hours ago