Categories: ಲೇಖನ

ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ……

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,

ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌……

ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ.
ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ…..

ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ.
ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ……

ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ,
ದೇವ ಮಂದಿರ ಮಠ ಮಾನ್ಯಗಳು ಭಾವನೆಗಳನ್ನು ನಿಯಂತ್ರಿಸುತ್ತವೆ……

ಐತಿಹಾಸಿಕ ಮತ್ತು ಪೌರಾಣಿಕ ಘಟನೆಗಳು ಕುತೂಹಲ ಮೂಡಿಸುತ್ತದೆ,
ಪ್ರಸ್ತುತ ರಾಜಕೀಯ ಮತ್ತು ಹಿಂಸಾತ್ಮಕ ಘಟನೆಗಳು ಅಸಹ್ಯ ಮತ್ತು ಬೇಸರ ಮೂಡಿಸುತ್ತದೆ…..

ಪ್ರಕೃತಿಯೊಂದಿಗಿನ ಒಡನಾಟ ಜೀವನೋತ್ಸಾಹ ಹೆಚ್ಚಿಸುತ್ತದೆ.
ಆಧುನಿಕ ತಂತ್ರಜ್ಞಾನದ ಒಡನಾಟ ಜೀವನದ ಬಗ್ಗೆ ಜಿಗುಪ್ಸೆ ಹೆಚ್ಚಿಸುತ್ತದೆ……

ಪ್ರಶ್ನಿಸುವ ಮನೋಭಾವ ಮನಸ್ಸನ್ನು ವಿಶಾಲಗೊಳಿಸಿ ಸದಾ ಜಾಗೃತವಾಗಿಟ್ಟಿರುತ್ತದೆ.
ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಮನಸ್ಸನ್ನು ಸಂಕುಚಿತಗೊಳಿಸಿ ಅರಿವಿನ ಮಟ್ಟವನ್ನು ಕುಗ್ಗಿಸುತ್ತದೆ……

ದ್ವೇಷ, ಅಸೂಯೆ, ಅಹಂಕಾರ, ಪ್ರತಿಕಾರಗಳು ಸಂಬಂಧಗಳನ್ನು ನಾಶಪಡಿಸುತ್ತದೆ.
ಪ್ರೀತಿ, ಸಹಕಾರ, ತ್ಯಾಗ, ತಾಳ್ಮೆ ಸಂಬಂಧಗಳನ್ನು ಬೆಳೆಸುತ್ತವೆ……

ಈ ಎಲ್ಲಾ ಆಯ್ಕೆಗಳು ಬಹುತೇಕ ನಮ್ಮ ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ.
ಅನಿವಾರ್ಯತೆ ಹೊರತುಪಡಿಸಿ
ನಾವು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುತ್ತೇವೆ ಎಂಬುದರ ಮೇಲೆ ಬದುಕಿನ ಘನತೆ ನಿರ್ಧರಿಸಲ್ಪಡುತ್ತದೆ……

ಆಯ್ಕೆಗೆ ಮುನ್ನ ದಯವಿಟ್ಟು ಯೋಚಿಸಿ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

17 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago