ಎಸಿ ಕೋರ್ಟ್ ಗಳಲ್ಲಿ 6 ತಿಂಗಳಿಗಿಂತ ಹೆಚ್ಚಿನ ಅವಧಿಯ ಎಲ್ಲಾ ತಕರಾರು ಪ್ರಕರಣಗಳನ್ನು ಅಂತ್ಯಗೊಳಿಸಬೇಕು, ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶ. ಆದರೆ, ಒಂದೂವರೆ ವರ್ಷ ಕಳೆದರೂ ಇದು ಸಾಧ್ಯವಾಗದಿರುವುದು ದುರಾದೃಷ್ಟಕರ. ಹೀಗಾಗಿ ಮುಂದಿನ 6 ತಿಂಗಳೊಳಗಾಗಿ ಅವಧಿ ಮೀರಿದ ಎಲ್ಲಾ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು ಎಂದು ಇಂದಿನ ಉಪ ವಿಭಾಗಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಲ್ಲಾ ಅಧಿಕಾರಿಗಳಿಗೂ ಸಮಯದ ಗಡುವನ್ನು ನಿಗದಿ ಮಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ.
ಉಪ ವಿಭಾಗಾಧಿಕಾರಿಗಳ(ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಗಡುವನ್ನು ನಿಗದಿಗೊಳಿಸಿದ್ದಾರೆ.
ವಿಕಾಸಸೌಧದಲ್ಲಿ ವೀಡಿಯೊ ಕಾನ್ಸರೆನ್ಸ್ ಮೂಲಕ ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ ಎಂದು ಹೇಳಿದರು.
ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರ್ಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ತಡೆ ಹಾಕಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು. ಆದರೆ, ಒಂದೂವರೆ ವರ್ಷ ಕಳೆದರೂ ನಮ್ಮ ಈ ಉದ್ದೇಶ ಈಡೇರಿಲ್ಲ, ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಉಪ ವಿಭಾಗಾಧಿಕಾರಿಗಳನ್ನು ನೇಮಕ ಮಾಡಿದರೂ ಶೇ.55ರಷ್ಟು ಪ್ರಕರಣಗಳನ್ನು ಮಾತ್ರ ವಿಲೇ ಮಾಡಲಾಗಿದೆ. ಎಸಿ ನ್ಯಾಯಾಲಯಗಳಲ್ಲಿ ಇನ್ನೂ29 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆರು ತಿಂಗಳ ನಂತರವೂ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಅಲ್ಲದೆ, ಈ ಸಂಬಂಧ ಪ್ರತೀ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು. ನ್ಯಾಯಾಲಯಗಳ ತಕರಾರು ಪ್ರಕರಣಗಳ ವಿಲೇವಾರಿಯ ಜೊತೆಗೆ ಪೋಡಿ ದುರಸ್ಥಿ, ನಮೂನೆ 3-9 ಮಿಸ್ ಮ್ಯಾಚ್ ಹಾಗೂ ಪೌತಿ ಖಾತೆ ಆಂದೋಲನ ಉಪ ವಿಭಾಗಾಧಿಕಾರಿಗಳ ಮಟ್ಟದಲ್ಲೇ ನಡೆಯಬೇಕು ಎಂದರು.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಆಯುಕ್ತ ಸುನೀಲ್ ಕುಮಾರ್, ಸರ್ವೆ ಇಲಾಖೆ ಆಯುಕ್ತ ಮಂಜುನಾಥ್ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…