ಕೋಲಾರ: ನಗರದ ಎಸ್.ಎನ್ ಆರ್ ಜಿಲ್ಲಾಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತ್ರ ಚಿಕಿತ್ಸಕರನ್ನು ನೇಮಕ ಮಾಡಿ ಗ್ರಾಮೀಣ ಪ್ರದೇಶದ ಬಡ ರೈತ ಕೂಲಿಕಾರ್ಮಿಕರಿಗೆ ಆರೋಗ್ಯ ನೀಡುವಂತೆ ಆರೋಗ್ಯ ಸಚಿವರನ್ನು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದರು.
ಕಳೆದ ಒಂದು ವರ್ಷದಿಂದ ಜಿಲ್ಲಾಸ್ಪತ್ರೆಗೆ ಖಾಯಂ ಶಸ್ತ್ರ ಚಿಕಿತ್ಸಕರನ್ನು ನೇಮಕ ಮಾಡುವಲ್ಲಿ ಉಸ್ತುವಾರಿ ಸಚಿವರು ಜಿಲ್ಲೆಯ ಜನಪ್ರತಿನಿಧಿಗಳು ವಿಫಲವಾಗಿ ಬಡವರ ಆರೋಗ್ಯವನ್ನು ಖಾಸಗಿ ಆಸ್ಪತ್ರೆ, ನಕಲಿ ಕ್ಲಿನಿಕ್ ವೈದ್ಯರಿಗೆ ಮಾರಾಟ ಮಾಡುತ್ತಿದ್ದಾರೆಂದು ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಸ್ಪತ್ರೆ ನೋಡಲು ತಾಜ್ ಮಹಲ್ ನಂತೆ ಕಂಗೊಳಿಸುತ್ತಿರುತ್ತದೆ. ಲಕ್ಷ ಲಕ್ಷ ಸಂಬಳ ಪಡೆಯುವ ವೈದ್ಯರು ಅಲ್ಲಿನ ಸಿಬ್ಬಂದಿ ಮೊಬೈಲ್ ಗಳಲ್ಲಿ ತಲ್ಲೀನರಾಗಿ ರೋಗಿಗಳ ಕಡೆ ಗಮನಹರಿಸದೆ ಮೂಲಭೂತ ಸೌಕರ್ಯಗಳು ವಂಚಿತ ಆಸ್ಪತ್ರೆಯಾಗಿ ಮಾರ್ಪಾಡಾಗಿರುವ ಜೊತೆಗೆ ನೆಪ ಮಾತ್ರಕ್ಕೆ ಕೆಲಸಕ್ಕೆ ಹಾಜರಾಗಲು ಬಯೋಮೆಟ್ರಿಕ್ ತಂಬ್ ನೀಡಿ ನಾಪತ್ತೆಯಾದರೆ ಮತ್ತೆ ಸಾಯಂಕಾಲ ಬಯೋಮೆಟ್ರಿಕ್ ಕಡೆ ಮುಖ ಮಾಡಿ ಸರ್ಕಾರದ ಕೆಲಸಕ್ಕೆ ದ್ರೋಹ ಬಗೆಯುತ್ತಿದ್ದಾರೆಂದು ಆರೋಪಿಸಿದರು.
ಕುಡಿಯುವ ನೀರಿನ ವ್ಯವಸ್ಥೆಯಿಲ್ಲ, ಶೌಚಾಲಯ ಸ್ವಚ್ಛತೆಯಿಲ್ಲ, ರಕ್ತ ಪರೀಕ್ಷೆ ಕೇಂದ್ರಗಳಲ್ಲಿ ಸೌಲಭ್ಯಗಳಿಲ್ಲ ಪ್ರತಿಯೊಂದು ಆಸ್ಪತ್ರೆಯಲ್ಲಿ ಅವ್ಯವಸ್ಥೆಯಾಗಿದ್ದರೂ ಸರಿಪಡಿಸಬೇಕಾದ ಜನಪ್ರತಿನಿಧಿಗಳು ನಾಪತ್ತೆಯಾಗಿ ಆರೋಗ್ಯ ಸಚಿವರು ಬಂದಾಗ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಮನವರಿಕೆ ಮಾಡದೆ ಎಲ್ಲಾ ಸೌಲಭ್ಯಗಳು ರೋಗಿಗಳಿಗೆ ದೊರೆಯುತ್ತವೆ ಎಂದು ದಿಕ್ಕುತಪ್ಪಿಸುವ ಜನಪ್ರತಿನಿಧಿಗಳಿಗೆ ಬಡವರ ಶಾಪ ತಟ್ಟುವ ಕಾಲ ದೂರವಿಲ್ಲ ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕರಿಲ್ಲದೆ ಕೋಮಾ ಸ್ಥಿತಿಯಲ್ಲಿರುವ ರೋಗಿಯಂತಾಗಿರುವ ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಕ ಮಾಡಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಗ್ರಾಮೀಣ ಪ್ರದೇಶದ ಬಡ ರೋಗಿಗಳಿಗೆ ಆರೋಗ್ಯ ನೀಡುವಂತೆ ಆರೋಗ್ಯ ಸಚಿವರನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪುತ್ತೇರಿ ರಾಜು ಇದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…