ಕೋಲಾರ: ಭಾರತ ವಿಧ್ಯಾರ್ಥಿ ಫೆಡರೇಷನ್ನ (ಎಸ್ಎಫ್ಐ) ಸಂಘಟನೆಯ ರಾಜ್ಯ ಸಹ ಕಾರ್ಯದರ್ಶಿಯಾಗಿ ಸುರೇಶ್ ಬಾಬು ಆಯ್ಕೆಯಾಗಿದ್ದಾರೆ.
ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಇಬಿ ಸಮುದಾಯ ಭವನದಲ್ಲಿ ನಡೆದ ಎಸ್ಎಫ್ಐ ಸಂಘಟನೆಯ 16 ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
SFi ರಾಜ್ಯ ಸಹ ಕಾರ್ಯದರ್ಶಿ ಸುರೇಶ್ ಬಾಬು ಮಾತನಾಡಿ, ಇಡೀ ಕರ್ನಾಟಕ ವಿದ್ಯಾರ್ಥಿಗಳು ನಮ್ಮ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿರುತ್ತಾರೆ. ನಮ್ಮ ಮೇಲೆ ವಿಶ್ವಾಸವಿಟ್ಟು ನಮ್ಮನ್ನು ಆಯ್ಕೆ ಮಾಡಿದ ಇಡೀ ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳಿಗೆ ಧನ್ಯವಾದಗಳು. ಈ ಸಮ್ಮೇಳನದಲ್ಲಿ ನಿರ್ಧಾರವಾದಂತೆ ವಿದ್ಯಾರ್ಥಿ ಚಳುವಳಿ ಎಸ್ಎಫ್ ಐನ್ನು ಇಡೀ ಕರ್ನಾಟಕದ್ಯಾಂತ ಗಟ್ಟಿಗೊಳಿಸಲು ಮುನ್ನಡೆಯುತ್ತೇವೆ ಎಂದರು.
ಸಮ್ಮೇಳನದ ಘೋಷಣೆಯಾದ ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗ, ಸಮಾನತೆ, ಸಹೋದರತ್ವದ ಗುರಿಗಳನ್ನು ಸಾಧಿಸಲು ಇಡೀ ಕರ್ನಾಟಕದ್ಯಾಂತ ಧ್ವನಿ ಎತ್ತುತ್ತೇವೆ. ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಇಡೀ ಪ್ರತಿಭಟಿಸುತ್ತೇವೆ ಎಂದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…