ಎಸ್‌ಎಫ್‌ಐ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ಸಾರ್ವತ್ರಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗೆ ಸೆ.26, 27, 28ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಎಸ್‌ಎಫ್‌ಐ ರಾಜ್ಯ ಸಮ್ಮೇಳನದ ಪೋಸ್ಟರ್ ನ್ನು ಸರ್ಕಾರಿ ಬಸ್ ನಿಲ್ದಾನದಲ್ಲಿ ಬಿಡುಗಡೆ ಮಾಡಲಾಯಿತು.

ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಸಮಾಜವಾದದ ಆಶಯಗಳನ್ನಿಟ್ಟುಕೊಂಡು ಅಭ್ಯಾಸ, ಹೋರಾಟ ಮತ್ತು ತ್ಯಾಗ ಎಂಬ ಘೋಷವಾಕ್ಯದಡಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆ ಉಳಿವಿಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುತ್ತಿರುವ ದೇಶದ ಅತಿದೊಡ್ಡ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದು ತಾಲ್ಲೂಕು ಅಧ್ಯಕ್ಷೆ ಅರ್ಚನಾ‌ ಹೇಳಿದರು.

ಸರಕಾರಗಳು ದೇಶದ ಮತ್ತು ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ವರ್ಷದಿಂದ ವರ್ಷಕ್ಕೆ ಹಣಕಾಸನ್ನು ಕಡಿತ ಮಾಡುತ್ತಾ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುತ್ತಿವೆ. ಸರಕಾರಿ ಶಾಲೆ ಮುಚ್ಚುವ ಇಲ್ಲವೆ ಇತರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗಿ ಶಾಲೆಗಳಿಗೆ ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿದಾರಿದರು. ಬಡ, ಕೃಷಿ ಕೂಲಿಕಾರ್ಮಿಕರ, ದಲಿತ ಹಾಗೂ ಅಲ್ಪಸಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ನಿರಂತರ ಹೋರಾಟ ರೂಪಿಸುತ್ತಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗಕ್ಕಾಗಿ ಶ್ರಮಿಸುತ್ತಿದೆ ಎಂದರು.

ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಆಗ್ರಹಿಸಿ
ಚಿಕ್ಕಬಳ್ಳಾಪುರದಲ್ಲಿ  ಸೆ.26,27,28 ನಡೆಯುವ ಎಸ್.ಎಫ್.ಐ. 16ನೇ ರಾಜ್ಯ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ ಎಂದರು.

ಮಾಜಿ ಜಿಲ್ಲಾ ಕಾರ್ಯದರ್ಶಿ ಬೀರಾಜ್, ತಾಲೂಕು ಕಾರ್ಯದರ್ಶಿ ಸುದರ್ಶನ್, ನೂತನ ಜಿಲ್ಲಾ ಕಾರ್ಯದರ್ಶಿ ಸುರೇಶ್, ತಾಲ್ಲೂಕು ಅಧ್ಯಕ್ಷೆ ಅರ್ಚನಾ, ತಾಲ್ಲೂಕು ಕಾರ್ಯದರ್ಶಿ ಸುದರ್ಶನ್, ಜಿಲ್ಲಾ ಸಮಿತಿ ಸದಸ್ಯ ಅಜಯ್ ಕುಮಾರ್ ಹಾಗೂ ತಾಲ್ಲೂಕು ಸಮಿತಿ ಸದಸ್ಯರಾದ ನಾಗೇಶ್, ರಾಜೇಶ್ ಸೇರಿದಂತೆ ಮುಂತಾದವರಿದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

6 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

6 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

9 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

20 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

22 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

1 day ago