ಸಾರ್ವತ್ರಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗೆ ಸೆ.26, 27, 28ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಎಸ್ಎಫ್ಐ ರಾಜ್ಯ ಸಮ್ಮೇಳನದ ಪೋಸ್ಟರ್ ನ್ನು ಸರ್ಕಾರಿ ಬಸ್ ನಿಲ್ದಾನದಲ್ಲಿ ಬಿಡುಗಡೆ ಮಾಡಲಾಯಿತು.
ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಸಮಾಜವಾದದ ಆಶಯಗಳನ್ನಿಟ್ಟುಕೊಂಡು ಅಭ್ಯಾಸ, ಹೋರಾಟ ಮತ್ತು ತ್ಯಾಗ ಎಂಬ ಘೋಷವಾಕ್ಯದಡಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆ ಉಳಿವಿಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುತ್ತಿರುವ ದೇಶದ ಅತಿದೊಡ್ಡ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದು ತಾಲ್ಲೂಕು ಅಧ್ಯಕ್ಷೆ ಅರ್ಚನಾ ಹೇಳಿದರು.
ಸರಕಾರಗಳು ದೇಶದ ಮತ್ತು ರಾಜ್ಯ ಬಜೆಟ್ನಲ್ಲಿ ಶಿಕ್ಷಣಕ್ಕೆ ವರ್ಷದಿಂದ ವರ್ಷಕ್ಕೆ ಹಣಕಾಸನ್ನು ಕಡಿತ ಮಾಡುತ್ತಾ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುತ್ತಿವೆ. ಸರಕಾರಿ ಶಾಲೆ ಮುಚ್ಚುವ ಇಲ್ಲವೆ ಇತರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗಿ ಶಾಲೆಗಳಿಗೆ ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿದಾರಿದರು. ಬಡ, ಕೃಷಿ ಕೂಲಿಕಾರ್ಮಿಕರ, ದಲಿತ ಹಾಗೂ ಅಲ್ಪಸಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ನಿರಂತರ ಹೋರಾಟ ರೂಪಿಸುತ್ತಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗಕ್ಕಾಗಿ ಶ್ರಮಿಸುತ್ತಿದೆ ಎಂದರು.
ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಆಗ್ರಹಿಸಿ
ಚಿಕ್ಕಬಳ್ಳಾಪುರದಲ್ಲಿ ಸೆ.26,27,28 ನಡೆಯುವ ಎಸ್.ಎಫ್.ಐ. 16ನೇ ರಾಜ್ಯ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ ಎಂದರು.
ಮಾಜಿ ಜಿಲ್ಲಾ ಕಾರ್ಯದರ್ಶಿ ಬೀರಾಜ್, ತಾಲೂಕು ಕಾರ್ಯದರ್ಶಿ ಸುದರ್ಶನ್, ನೂತನ ಜಿಲ್ಲಾ ಕಾರ್ಯದರ್ಶಿ ಸುರೇಶ್, ತಾಲ್ಲೂಕು ಅಧ್ಯಕ್ಷೆ ಅರ್ಚನಾ, ತಾಲ್ಲೂಕು ಕಾರ್ಯದರ್ಶಿ ಸುದರ್ಶನ್, ಜಿಲ್ಲಾ ಸಮಿತಿ ಸದಸ್ಯ ಅಜಯ್ ಕುಮಾರ್ ಹಾಗೂ ತಾಲ್ಲೂಕು ಸಮಿತಿ ಸದಸ್ಯರಾದ ನಾಗೇಶ್, ರಾಜೇಶ್ ಸೇರಿದಂತೆ ಮುಂತಾದವರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…