ಎಸ್‌ಎಫ್‌ಐ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ಸಾರ್ವತ್ರಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗೆ ಸೆ.26, 27, 28ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಎಸ್‌ಎಫ್‌ಐ ರಾಜ್ಯ ಸಮ್ಮೇಳನದ ಪೋಸ್ಟರ್ ನ್ನು ಸರ್ಕಾರಿ ಬಸ್ ನಿಲ್ದಾನದಲ್ಲಿ ಬಿಡುಗಡೆ ಮಾಡಲಾಯಿತು.

ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಸಮಾಜವಾದದ ಆಶಯಗಳನ್ನಿಟ್ಟುಕೊಂಡು ಅಭ್ಯಾಸ, ಹೋರಾಟ ಮತ್ತು ತ್ಯಾಗ ಎಂಬ ಘೋಷವಾಕ್ಯದಡಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆ ಉಳಿವಿಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುತ್ತಿರುವ ದೇಶದ ಅತಿದೊಡ್ಡ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದು ತಾಲ್ಲೂಕು ಅಧ್ಯಕ್ಷೆ ಅರ್ಚನಾ‌ ಹೇಳಿದರು.

ಸರಕಾರಗಳು ದೇಶದ ಮತ್ತು ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ವರ್ಷದಿಂದ ವರ್ಷಕ್ಕೆ ಹಣಕಾಸನ್ನು ಕಡಿತ ಮಾಡುತ್ತಾ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುತ್ತಿವೆ. ಸರಕಾರಿ ಶಾಲೆ ಮುಚ್ಚುವ ಇಲ್ಲವೆ ಇತರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗಿ ಶಾಲೆಗಳಿಗೆ ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿದಾರಿದರು. ಬಡ, ಕೃಷಿ ಕೂಲಿಕಾರ್ಮಿಕರ, ದಲಿತ ಹಾಗೂ ಅಲ್ಪಸಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ನಿರಂತರ ಹೋರಾಟ ರೂಪಿಸುತ್ತಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗಕ್ಕಾಗಿ ಶ್ರಮಿಸುತ್ತಿದೆ ಎಂದರು.

ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಆಗ್ರಹಿಸಿ
ಚಿಕ್ಕಬಳ್ಳಾಪುರದಲ್ಲಿ  ಸೆ.26,27,28 ನಡೆಯುವ ಎಸ್.ಎಫ್.ಐ. 16ನೇ ರಾಜ್ಯ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ ಎಂದರು.

ಮಾಜಿ ಜಿಲ್ಲಾ ಕಾರ್ಯದರ್ಶಿ ಬೀರಾಜ್, ತಾಲೂಕು ಕಾರ್ಯದರ್ಶಿ ಸುದರ್ಶನ್, ನೂತನ ಜಿಲ್ಲಾ ಕಾರ್ಯದರ್ಶಿ ಸುರೇಶ್, ತಾಲ್ಲೂಕು ಅಧ್ಯಕ್ಷೆ ಅರ್ಚನಾ, ತಾಲ್ಲೂಕು ಕಾರ್ಯದರ್ಶಿ ಸುದರ್ಶನ್, ಜಿಲ್ಲಾ ಸಮಿತಿ ಸದಸ್ಯ ಅಜಯ್ ಕುಮಾರ್ ಹಾಗೂ ತಾಲ್ಲೂಕು ಸಮಿತಿ ಸದಸ್ಯರಾದ ನಾಗೇಶ್, ರಾಜೇಶ್ ಸೇರಿದಂತೆ ಮುಂತಾದವರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

7 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

15 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago