ಎಸ್‌ಎಫ್‌ಐ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ಸಾರ್ವತ್ರಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗೆ ಸೆ.26, 27, 28ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಎಸ್‌ಎಫ್‌ಐ ರಾಜ್ಯ ಸಮ್ಮೇಳನದ ಪೋಸ್ಟರ್ ನ್ನು ಸರ್ಕಾರಿ ಬಸ್ ನಿಲ್ದಾನದಲ್ಲಿ ಬಿಡುಗಡೆ ಮಾಡಲಾಯಿತು.

ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಸಮಾಜವಾದದ ಆಶಯಗಳನ್ನಿಟ್ಟುಕೊಂಡು ಅಭ್ಯಾಸ, ಹೋರಾಟ ಮತ್ತು ತ್ಯಾಗ ಎಂಬ ಘೋಷವಾಕ್ಯದಡಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆ ಉಳಿವಿಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುತ್ತಿರುವ ದೇಶದ ಅತಿದೊಡ್ಡ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದು ತಾಲ್ಲೂಕು ಅಧ್ಯಕ್ಷೆ ಅರ್ಚನಾ‌ ಹೇಳಿದರು.

ಸರಕಾರಗಳು ದೇಶದ ಮತ್ತು ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ವರ್ಷದಿಂದ ವರ್ಷಕ್ಕೆ ಹಣಕಾಸನ್ನು ಕಡಿತ ಮಾಡುತ್ತಾ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುತ್ತಿವೆ. ಸರಕಾರಿ ಶಾಲೆ ಮುಚ್ಚುವ ಇಲ್ಲವೆ ಇತರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗಿ ಶಾಲೆಗಳಿಗೆ ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿದಾರಿದರು. ಬಡ, ಕೃಷಿ ಕೂಲಿಕಾರ್ಮಿಕರ, ದಲಿತ ಹಾಗೂ ಅಲ್ಪಸಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ನಿರಂತರ ಹೋರಾಟ ರೂಪಿಸುತ್ತಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗಕ್ಕಾಗಿ ಶ್ರಮಿಸುತ್ತಿದೆ ಎಂದರು.

ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಆಗ್ರಹಿಸಿ
ಚಿಕ್ಕಬಳ್ಳಾಪುರದಲ್ಲಿ  ಸೆ.26,27,28 ನಡೆಯುವ ಎಸ್.ಎಫ್.ಐ. 16ನೇ ರಾಜ್ಯ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ ಎಂದರು.

ಮಾಜಿ ಜಿಲ್ಲಾ ಕಾರ್ಯದರ್ಶಿ ಬೀರಾಜ್, ತಾಲೂಕು ಕಾರ್ಯದರ್ಶಿ ಸುದರ್ಶನ್, ನೂತನ ಜಿಲ್ಲಾ ಕಾರ್ಯದರ್ಶಿ ಸುರೇಶ್, ತಾಲ್ಲೂಕು ಅಧ್ಯಕ್ಷೆ ಅರ್ಚನಾ, ತಾಲ್ಲೂಕು ಕಾರ್ಯದರ್ಶಿ ಸುದರ್ಶನ್, ಜಿಲ್ಲಾ ಸಮಿತಿ ಸದಸ್ಯ ಅಜಯ್ ಕುಮಾರ್ ಹಾಗೂ ತಾಲ್ಲೂಕು ಸಮಿತಿ ಸದಸ್ಯರಾದ ನಾಗೇಶ್, ರಾಜೇಶ್ ಸೇರಿದಂತೆ ಮುಂತಾದವರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

7 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

18 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

19 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

20 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

21 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago