Categories: ಶಿಕ್ಷಣ

ಎಸ್ಎಸ್ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶೇಕಡ 73.40 ಫಲಿತಾಂಶ ದಾಖಲು: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ: ಯಾದಗಿರಿಗೆ ಕೊನೆ ಸ್ಥಾನ

2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಗೊಳಿಸಿದೆ.

ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ  ಫಲಿತಾಂಶ ವೀಕ್ಷಿಸಬಹುದು.

ಪರೀಕ್ಷೆ ಬರೆದ ಒಟ್ಟು 8,59,967 ವಿದ್ಯಾರ್ಥಿಗ ಪೈಕಿ 6,31,204 ವಿದ್ಯಾರ್ಥಿಗಳು ಪಾಸಾಗಿದ್ದು, ಈ ಸಾಲಿನಲ್ಲಿ ಶೇಕಡ 73.40 ಫಲಿತಾಂಶ ದಾಖಲಾಗಿದೆ.

ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷವೆಂದರೆ ಒಬ್ಬ ವಿದ್ಯಾರ್ಥಿನಿ ಮಾತ್ರ 625ಕ್ಕೆ 625 ಅಂಕ ಗಳಿಸಿದ್ದಾರೆ.

ಬಾಗಲಕೋಟದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 625ಕ್ಕೆ 625 ಅಂಕ ಗಳಿಸಿರುವ ಏಕೈಕ ವಿದ್ಯಾರ್ಥಿನಿ.

7 ವಿದ್ಯಾರ್ಥಿಗಳು 625ಕ್ಕೆ 624 ಅಂಕ ಗಳಿಸಿದ್ದಾರೆ.ದಕ್ಷಿಣ ಕನ್ನಡದ ಚಿನ್ಮಯ್, ಚಿಕ್ಕೋಡಿಯ ಸಿದ್ದಾಂತ್, ಮಧುಗಿರಿಯ ಹರ್ಷಿತಾ ಡಿ. ಎಂ, ಬೆಂಗಳೂರಿನ ವೇದಾ ಪಿ ಶೆಟ್ಟಿ, ಉಡುಪಿಯ ಸಹನಾ, ಶಿರ್ಸಿಯ ದರ್ಶನ್, ಚಿನ್ಮಯ್, ಸಿದ್ದಾಂತ್ ಕೂಡ ದ್ವಿತೀಯ ಸ್ಥಾನದಲ್ಲಿದ್ದಾರೆ.

ಮಾರ್ಚ್ 25, 2024 ರಿಂದ ಏಪ್ರಿಲ್ 6, 2024 ರವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ 441910 ವಿದ್ಯಾರ್ಥಿಗಳು ಮತ್ತು 428058 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿ 6,31,204 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಈ ಬಾರಿ ರಾಜ್ಯಾದ್ಯಂತ 76.91% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

 2,87,416 (65.90%) ಬಾಲಕರು ಪಾಸ್ ಆಗಿದ್ದು, 3,43,788 (81.11%) ಬಾಲಕಿಯರು ತೇರ್ಗಡೆಯಾಗಿದ್ದಾರೆ.  ಇದರೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಾಲಕಿಯರು ಅಗ್ರಸ್ಥಾನ ಪಡೆದಿದ್ದಾರೆ. ಉಡುಪಿ ಪ್ರಥಮ ಸ್ಥಾನ (ಶೇ.94) ಪಡೆದಿದೆ. ದಕ್ಷಿಣ ಕನ್ನಡ (ಶೇ.92.12) ಜಿಲ್ಲೆ ದ್ವಿತೀಯ ಹಾಗೂ ಶಿವಮೊಗ್ಗ (ಶೇ.88.67) ತೃತೀಯ ಸ್ಥಾನ ಪಡೆದಿವೆ. ಯಾದಗಿರಿ ಜಿಲ್ಲೆ ರಾಜ್ಯದಲ್ಲಿ ಶೇಕಡಾವಾರು (50.59%) ಕೊನೆಯ ಸ್ಥಾನದಲ್ಲಿದೆ.

ಬೆಂ.ಗ್ರಾ. ಜಿಲ್ಲೆ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 83.67 ರಷ್ಟು ಫಲಿತಾಂಶ

2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 83.67 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಒಂಬತ್ತನೆಯ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 14223 ವಿದ್ಯಾರ್ಥಿಗಳಲ್ಲಿ 11900 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ, ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ವಿದ್ಯಾರ್ಥಿನಿ ಸ್ನೇಹ.‌ಎಲ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಿಗೆ 621 ಅಂಕಗಳನ್ನು ಪಡೆಯುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಶಾಂತಿನಿಕೇತನ ಆಂಗ್ಲ ಶಾಲೆಯ ಮಹೇಶ್ವರಿ 625 ಕ್ಕೆ 620 ಅಂಕ ಪಡೆದು ದ್ವಿತೀಯ ಸ್ಥಾನ, ದೊಡ್ಡಬಳ್ಳಾಪುರ ಟೌನ್ ನ ನಳಂದ ಪ್ರೌಢಶಾಲೆಯ ಪೂರ್ಣ ಶ್ರೀ 625 ಕ್ಕೆ 619 ಅಂಕಿಗಳು ಪಡೆಯುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ.

6988 ಬಾಲಕಿಯರ ಪೈಕಿ 6171 ಬಾಲಕಿಯರು ಉತ್ತೀರ್ಣರಾಗಿ ಶೇ. 88.31 ರಷ್ಟು ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಬಾಲಕರು 7235 ಕ್ಕೆ 5729 ಉತ್ತೀರ್ಣತೆ ಪಡೆದು ಶೇ. 79.18 ರಷ್ಟು ಫಲಿತಾಂಶ ಪಡೆದಿದ್ದಾರೆ.

ದೇವನಹಳ್ಳಿ ಶೇ. 88.2 ರಷ್ಟು, ದೊಡ್ಡಬಳ್ಳಾಪುರ ಶೇ. 83.13 ರಷ್ಟು, ಹೊಸಕೋಟೆ ತಾಲ್ಲೂಕು ಶೇ. 82.22 ರಷ್ಟು ಹಾಗೂ ನೆಲಮಂಗಲ ತಾಲ್ಲೂಕು ಶೇ. 79.51 ರಷ್ಟು ಫಲಿತಾಂಶ ಪಡೆದಿವೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

6 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

7 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

7 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

10 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

13 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

13 hours ago