ಕೋಲಾರ: ರಾಜ್ಯದಲ್ಲಿ ಜಾತಿ ಸಮೀಕ್ಷೆಯಯಲ್ಲಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸಲು ನಡೆಸುತ್ತಿರುವ ಪ್ರಯತ್ನಗಳನ್ನು ಈ ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮುದಾಯವು ರಾಜ್ಯದಲ್ಲಿ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ತೀರ ಹಿಂದುಳಿದಿದ್ದು ರಾಜಕೀಯವಾಗಿ ಅಧಿಕಾರಗಳನ್ನು ಪಡೆಯುವುದು ಸಹ ತುಂಬಾ ಕಷ್ಟವಾಗಿದೆ ಇಂತಹ ಸಂದರ್ಭದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗಳಿಗೆ ಸೇರಿಸುವ ಪ್ರಯತ್ನವು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ ಸಂವಿಧಾನ ಬದ್ಧವಾಗಿ ಕೆಲವು ಜಿಲ್ಲೆಗಳಲ್ಲಿ ಜೇನು ಕುರುಬ, ಕಾಡು ಕುರುಬ ಇನ್ನು ಕೆಲವು ಉಪ ಪಂಗಡಗಳಲ್ಲಿ ಇರತಕ್ಕಂತವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ ಮುಖ್ಯ ವಾಹಿನಿಯಲ್ಲಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡ ಎಂ.ಬಾಲಗೋವಿಂದ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ 15 ಮೀಸಲಾತಿ ಕ್ಷೇತ್ರಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು. ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 14 ಶಾಸಕರನ್ನು ನೀಡಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆಯಬಾರದು ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸರ್ಕಾರದ ಪ್ರಯತ್ನವನ್ನು ಈ ಕೂಡಲೇ ಕೈಬಿಡಬೇಕು ಒಂದು ವೇಳೆ ತಾವು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನ ನಡೆಸಿದರೆ ರಾಜ್ಯಾದ್ಯಂತ ತೀವು ಸ್ವರೂಪದ ಹೋರಾಟವನ್ನು ಕೂಡ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯದ ರಾಜ್ಯ ಮುಖಂಡ ಮಾಲೂರು ಎನ್ ವೆಂಕಟರಾಮ್ ಮಾತನಾಡಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರ್ಪಡೆ ಕೂಡಲೇ ಕೈಬಿಡಬೇಕು ಇಲ್ಲದೇ ಹೋದರೆ ಮುಂದಿನ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಮಂಜುಳಾ ಶ್ರೀನಿವಾಸ್, ಶ್ರೀನಿವಾಸಪುರ ನರೇಶ್, ಬೆಳ್ಳೂರು ತಿರುಮಲೇಶ್, ಬೈರಂಡಹಳ್ಳಿ ನಾಗೇಶ್, ಮೇಡಹಾಳ ಮಂಜು, ಕಲ್ಲಂಡೂರು ನಾರಾಯಣಸ್ವಾಮಿ, ವಕ್ಕಲೇರಿ ನಾಗೇಶದ, ಕಲ್ವಮಂಜಲಿ ರವಿ, ಕೃಷ್ಣಪುರ ನರೇಶ್, ನಾಳಕುಂಟೆ ನವೀನ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…