Categories: ಕೋಲಾರ

ಎಸ್ಟಿಗೆ ಕುರುಬ ಸಮುದಾಯ ಸೇರ್ಪಡೆಗೆ ವಾಲ್ಮೀಕಿ ಸಂಘದಿಂದ ವಿರೋಧ

ಕೋಲಾರ: ರಾಜ್ಯದಲ್ಲಿ ಜಾತಿ ಸಮೀಕ್ಷೆಯಯಲ್ಲಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸಲು ನಡೆಸುತ್ತಿರುವ ಪ್ರಯತ್ನಗಳನ್ನು ಈ ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮುದಾಯವು ರಾಜ್ಯದಲ್ಲಿ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ತೀರ ಹಿಂದುಳಿದಿದ್ದು ರಾಜಕೀಯವಾಗಿ ಅಧಿಕಾರಗಳನ್ನು ಪಡೆಯುವುದು ಸಹ ತುಂಬಾ ಕಷ್ಟವಾಗಿದೆ ಇಂತಹ ಸಂದರ್ಭದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗಳಿಗೆ ಸೇರಿಸುವ ಪ್ರಯತ್ನವು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ ಸಂವಿಧಾನ ಬದ್ಧವಾಗಿ ಕೆಲವು ಜಿಲ್ಲೆಗಳಲ್ಲಿ ಜೇನು ಕುರುಬ, ಕಾಡು ಕುರುಬ ಇನ್ನು ಕೆಲವು ಉಪ ಪಂಗಡಗಳಲ್ಲಿ ಇರತಕ್ಕಂತವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ ಮುಖ್ಯ ವಾಹಿನಿಯಲ್ಲಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡ ಎಂ.ಬಾಲಗೋವಿಂದ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ 15 ಮೀಸಲಾತಿ ಕ್ಷೇತ್ರಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು. ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 14 ಶಾಸಕರನ್ನು ನೀಡಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆಯಬಾರದು ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸರ್ಕಾರದ ಪ್ರಯತ್ನವನ್ನು ಈ ಕೂಡಲೇ ಕೈಬಿಡಬೇಕು ಒಂದು ವೇಳೆ ತಾವು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನ ನಡೆಸಿದರೆ ರಾಜ್ಯಾದ್ಯಂತ ತೀವು ಸ್ವರೂಪದ ಹೋರಾಟವನ್ನು ಕೂಡ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮುದಾಯದ ರಾಜ್ಯ ಮುಖಂಡ ಮಾಲೂರು ಎನ್ ವೆಂಕಟರಾಮ್ ಮಾತನಾಡಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರ್ಪಡೆ ಕೂಡಲೇ ಕೈಬಿಡಬೇಕು ಇಲ್ಲದೇ ಹೋದರೆ ಮುಂದಿನ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಮಂಜುಳಾ ಶ್ರೀನಿವಾಸ್, ಶ್ರೀನಿವಾಸಪುರ ನರೇಶ್, ಬೆಳ್ಳೂರು ತಿರುಮಲೇಶ್, ಬೈರಂಡಹಳ್ಳಿ ನಾಗೇಶ್, ಮೇಡಹಾಳ ಮಂಜು, ಕಲ್ಲಂಡೂರು ನಾರಾಯಣಸ್ವಾಮಿ, ವಕ್ಕಲೇರಿ ನಾಗೇಶದ, ಕಲ್ವಮಂಜಲಿ ರವಿ, ಕೃಷ್ಣಪುರ ನರೇಶ್, ನಾಳಕುಂಟೆ ನವೀನ್ ಮುಂತಾದವರು ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago