ಕೋಲಾರ: ರಾಜ್ಯದಲ್ಲಿ ಜಾತಿ ಸಮೀಕ್ಷೆಯಯಲ್ಲಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸಲು ನಡೆಸುತ್ತಿರುವ ಪ್ರಯತ್ನಗಳನ್ನು ಈ ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮುದಾಯವು ರಾಜ್ಯದಲ್ಲಿ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ತೀರ ಹಿಂದುಳಿದಿದ್ದು ರಾಜಕೀಯವಾಗಿ ಅಧಿಕಾರಗಳನ್ನು ಪಡೆಯುವುದು ಸಹ ತುಂಬಾ ಕಷ್ಟವಾಗಿದೆ ಇಂತಹ ಸಂದರ್ಭದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗಳಿಗೆ ಸೇರಿಸುವ ಪ್ರಯತ್ನವು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ ಸಂವಿಧಾನ ಬದ್ಧವಾಗಿ ಕೆಲವು ಜಿಲ್ಲೆಗಳಲ್ಲಿ ಜೇನು ಕುರುಬ, ಕಾಡು ಕುರುಬ ಇನ್ನು ಕೆಲವು ಉಪ ಪಂಗಡಗಳಲ್ಲಿ ಇರತಕ್ಕಂತವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ ಮುಖ್ಯ ವಾಹಿನಿಯಲ್ಲಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡ ಎಂ.ಬಾಲಗೋವಿಂದ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ 15 ಮೀಸಲಾತಿ ಕ್ಷೇತ್ರಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು. ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 14 ಶಾಸಕರನ್ನು ನೀಡಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆಯಬಾರದು ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸರ್ಕಾರದ ಪ್ರಯತ್ನವನ್ನು ಈ ಕೂಡಲೇ ಕೈಬಿಡಬೇಕು ಒಂದು ವೇಳೆ ತಾವು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನ ನಡೆಸಿದರೆ ರಾಜ್ಯಾದ್ಯಂತ ತೀವು ಸ್ವರೂಪದ ಹೋರಾಟವನ್ನು ಕೂಡ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯದ ರಾಜ್ಯ ಮುಖಂಡ ಮಾಲೂರು ಎನ್ ವೆಂಕಟರಾಮ್ ಮಾತನಾಡಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರ್ಪಡೆ ಕೂಡಲೇ ಕೈಬಿಡಬೇಕು ಇಲ್ಲದೇ ಹೋದರೆ ಮುಂದಿನ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಮಂಜುಳಾ ಶ್ರೀನಿವಾಸ್, ಶ್ರೀನಿವಾಸಪುರ ನರೇಶ್, ಬೆಳ್ಳೂರು ತಿರುಮಲೇಶ್, ಬೈರಂಡಹಳ್ಳಿ ನಾಗೇಶ್, ಮೇಡಹಾಳ ಮಂಜು, ಕಲ್ಲಂಡೂರು ನಾರಾಯಣಸ್ವಾಮಿ, ವಕ್ಕಲೇರಿ ನಾಗೇಶದ, ಕಲ್ವಮಂಜಲಿ ರವಿ, ಕೃಷ್ಣಪುರ ನರೇಶ್, ನಾಳಕುಂಟೆ ನವೀನ್ ಮುಂತಾದವರು ಇದ್ದರು.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…