ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಆರು ತಿಂಗಳವರೆಗೆ ನೀರು ಪೂರೈಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಸೂಚಿಸಿದರು.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಅಂತರ್ಜಲ ಶುದ್ಧಿ ಆಗಬೇಕಾದರೆ ಆರು ತಿಂಗಳು ಬೇಕಾಗುತ್ತದೆ, ಅಷ್ಟರಲ್ಲಿ ಎಸ್ಟಿಪಿ ಪ್ಲಾಂಟ್, ಪೈಪ್ಲೈನ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದರು.
ಶನಿವಾರ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು ಅಷ್ಟರಲ್ಲಿ ತಾಲ್ಲೂಕಿನಲ್ಲಿ ಜಿಲ್ಲಾ ಪರಿಷತ್ ರಸ್ತೆಗಳೂ ಸೇರಿದಂತೆ ಹದಗೆಟ್ಟ ರಸ್ತೆಗಳು ಮತ್ತು ತುರ್ತಾಗಿ ಮಾಡಲೇಬೇಕಾದ ರಸ್ತೆಗಳು, ತಾಲ್ಲೂಕಿನಲ್ಲಿ ಹದಗೆಟ್ಟಿರುವ ಆರ್ಒ ಪ್ಲಾಂಟ್ಗಳು ಹೊಸದಾಗಿ ಆರಂಬಿಸಬೇಕಾದ ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.
ಸಭೆಯಲ್ಲಿ ತಹಶಿಲ್ದಾರ್ ಮೋಹನಕುಮಾರಿ, ಇಒ ಶ್ರೀನಾಥ್ಗೌಡ, ಪಿಡಬ್ಲೂ ಇಂಜಿನಿಯರ್ ಜಯಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಎಸ್ಆರ್.ಮುನಿರಾಜು, ರಂಗಪ್ಪ, ಕೆಪಿ.ಜಗನ್ನಾಥ್, ಅಖಿಲೇಶ್, ಆರ್ವಿ.ಮಹೇಶ್, ರಾಮಕೃಷ್ಣ ಸೇರಿದಂತೆ ತಾಲ್ಲೂಕು ಮಟ್ಟದ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…