ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಆರು ತಿಂಗಳವರೆಗೆ ನೀರು ಪೂರೈಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಸೂಚಿಸಿದರು.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಅಂತರ್ಜಲ ಶುದ್ಧಿ ಆಗಬೇಕಾದರೆ ಆರು ತಿಂಗಳು ಬೇಕಾಗುತ್ತದೆ, ಅಷ್ಟರಲ್ಲಿ ಎಸ್ಟಿಪಿ ಪ್ಲಾಂಟ್, ಪೈಪ್ಲೈನ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದರು.
ಶನಿವಾರ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು ಅಷ್ಟರಲ್ಲಿ ತಾಲ್ಲೂಕಿನಲ್ಲಿ ಜಿಲ್ಲಾ ಪರಿಷತ್ ರಸ್ತೆಗಳೂ ಸೇರಿದಂತೆ ಹದಗೆಟ್ಟ ರಸ್ತೆಗಳು ಮತ್ತು ತುರ್ತಾಗಿ ಮಾಡಲೇಬೇಕಾದ ರಸ್ತೆಗಳು, ತಾಲ್ಲೂಕಿನಲ್ಲಿ ಹದಗೆಟ್ಟಿರುವ ಆರ್ಒ ಪ್ಲಾಂಟ್ಗಳು ಹೊಸದಾಗಿ ಆರಂಬಿಸಬೇಕಾದ ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.
ಸಭೆಯಲ್ಲಿ ತಹಶಿಲ್ದಾರ್ ಮೋಹನಕುಮಾರಿ, ಇಒ ಶ್ರೀನಾಥ್ಗೌಡ, ಪಿಡಬ್ಲೂ ಇಂಜಿನಿಯರ್ ಜಯಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಎಸ್ಆರ್.ಮುನಿರಾಜು, ರಂಗಪ್ಪ, ಕೆಪಿ.ಜಗನ್ನಾಥ್, ಅಖಿಲೇಶ್, ಆರ್ವಿ.ಮಹೇಶ್, ರಾಮಕೃಷ್ಣ ಸೇರಿದಂತೆ ತಾಲ್ಲೂಕು ಮಟ್ಟದ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…