ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಆರು ತಿಂಗಳವರೆಗೆ ನೀರು ಪೂರೈಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಸೂಚಿಸಿದರು.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಅಂತರ್ಜಲ ಶುದ್ಧಿ ಆಗಬೇಕಾದರೆ ಆರು ತಿಂಗಳು ಬೇಕಾಗುತ್ತದೆ, ಅಷ್ಟರಲ್ಲಿ ಎಸ್ಟಿಪಿ ಪ್ಲಾಂಟ್, ಪೈಪ್ಲೈನ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದರು.
ಶನಿವಾರ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು ಅಷ್ಟರಲ್ಲಿ ತಾಲ್ಲೂಕಿನಲ್ಲಿ ಜಿಲ್ಲಾ ಪರಿಷತ್ ರಸ್ತೆಗಳೂ ಸೇರಿದಂತೆ ಹದಗೆಟ್ಟ ರಸ್ತೆಗಳು ಮತ್ತು ತುರ್ತಾಗಿ ಮಾಡಲೇಬೇಕಾದ ರಸ್ತೆಗಳು, ತಾಲ್ಲೂಕಿನಲ್ಲಿ ಹದಗೆಟ್ಟಿರುವ ಆರ್ಒ ಪ್ಲಾಂಟ್ಗಳು ಹೊಸದಾಗಿ ಆರಂಬಿಸಬೇಕಾದ ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.
ಸಭೆಯಲ್ಲಿ ತಹಶಿಲ್ದಾರ್ ಮೋಹನಕುಮಾರಿ, ಇಒ ಶ್ರೀನಾಥ್ಗೌಡ, ಪಿಡಬ್ಲೂ ಇಂಜಿನಿಯರ್ ಜಯಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಎಸ್ಆರ್.ಮುನಿರಾಜು, ರಂಗಪ್ಪ, ಕೆಪಿ.ಜಗನ್ನಾಥ್, ಅಖಿಲೇಶ್, ಆರ್ವಿ.ಮಹೇಶ್, ರಾಮಕೃಷ್ಣ ಸೇರಿದಂತೆ ತಾಲ್ಲೂಕು ಮಟ್ಟದ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…