ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಆರು ತಿಂಗಳವರೆಗೆ ನೀರು ಪೂರೈಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಸೂಚಿಸಿದರು.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಅಂತರ್ಜಲ ಶುದ್ಧಿ ಆಗಬೇಕಾದರೆ ಆರು ತಿಂಗಳು ಬೇಕಾಗುತ್ತದೆ, ಅಷ್ಟರಲ್ಲಿ ಎಸ್ಟಿಪಿ ಪ್ಲಾಂಟ್, ಪೈಪ್ಲೈನ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದರು.
ಶನಿವಾರ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು ಅಷ್ಟರಲ್ಲಿ ತಾಲ್ಲೂಕಿನಲ್ಲಿ ಜಿಲ್ಲಾ ಪರಿಷತ್ ರಸ್ತೆಗಳೂ ಸೇರಿದಂತೆ ಹದಗೆಟ್ಟ ರಸ್ತೆಗಳು ಮತ್ತು ತುರ್ತಾಗಿ ಮಾಡಲೇಬೇಕಾದ ರಸ್ತೆಗಳು, ತಾಲ್ಲೂಕಿನಲ್ಲಿ ಹದಗೆಟ್ಟಿರುವ ಆರ್ಒ ಪ್ಲಾಂಟ್ಗಳು ಹೊಸದಾಗಿ ಆರಂಬಿಸಬೇಕಾದ ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.
ಸಭೆಯಲ್ಲಿ ತಹಶಿಲ್ದಾರ್ ಮೋಹನಕುಮಾರಿ, ಇಒ ಶ್ರೀನಾಥ್ಗೌಡ, ಪಿಡಬ್ಲೂ ಇಂಜಿನಿಯರ್ ಜಯಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಎಸ್ಆರ್.ಮುನಿರಾಜು, ರಂಗಪ್ಪ, ಕೆಪಿ.ಜಗನ್ನಾಥ್, ಅಖಿಲೇಶ್, ಆರ್ವಿ.ಮಹೇಶ್, ರಾಮಕೃಷ್ಣ ಸೇರಿದಂತೆ ತಾಲ್ಲೂಕು ಮಟ್ಟದ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…