ಪತಿ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಹಾಸನ ನಗರ ಠಾಣೆಯ ಕಾನ್ಸ್ಟೆಬಲ್ ಲೋಕನಾಥ್ ತನ್ನ ಪತ್ನಿ ಮಮತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಪತ್ನಿ ಮಮತಾ ಬಂದಿದ್ದಾರೆ. ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.
ಲೋಕನಾಥ್ ಹಾಗೂ ಮಮತಾ ಇಬ್ಬರಿಗೂ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಕಳೆದ ನಾಲ್ಕೈದ ದಿನದಿಂದಲೂ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ದಂಪತಿಗಳು ಆಗಾಗ್ಗೆ ವಿವಿಧ ವಿಷಯಗಳಿಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಸಂಬಂಧಿಕರು ಅವರ ನಡುವೆ ಮಾತುಕತೆ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ.
ಇಂದು ಕೂಡ ದಂಪತಿಗಳು ಭೂವಿವಾದ ಸಂಬಂಧ ಪರಸ್ಪರ ಜಗಳವಾಡಿದ್ದು ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಹೊಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪತಿ ಲೋಕನಾಥ್ ವಿರುದ್ಧ ಎಸ್ ಪಿಗೆ ದೂರು ನೀಡಲು ಮಮತಾ ಮುಂದಾಗಿದ್ದರು. ಈ ವಿಚಾರ ತಿಳಿದ ಲೋಕನಾಥ್ ಆಕೆಯನ್ನು ಮನೆಯಿಂದ ಮೋಟಾರ್ ಸೈಕಲ್ ನಲ್ಲಿ ಮಮತಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.
ಪತ್ನಿ ಎಸ್ ಪಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಅಕೆಯನ್ನು ಮನಸೋ ಇಚ್ಛೆ ಇರಿದಿದ್ದಾನೆ.
ಈ ವೇಳೆ ಮಮತಾರ ಹೊಟ್ಟೆ ಮತ್ತು ಎದೆಗೆ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಮಮತಾ ಅವರನ್ನು ಎಸ್ಪಿ ಕಚೇರಿ ಸಮೀಪವಿರುವ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.
ಇರಿತದ ಬಳಿಕ ಲೋಕನಾಥ್ ತನ್ನ ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಹಮ್ಮದ್ ಸುಜೀತಾ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪತ್ನಿ ಮಮತಾ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಟ್ಟಿದೆ. ಮಗಳನ್ನ ನೆನೆದು ಹೆತ್ತ ತಾಯಿ ಕಣ್ಣೀರಿಡುತ್ತಿದ್ದಾರೆ. ಕೊಲೆ ಆರೋಪಿ ಲೋಕನಾಥ್ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…