ಪತಿ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಹಾಸನ ನಗರ ಠಾಣೆಯ ಕಾನ್ಸ್ಟೆಬಲ್ ಲೋಕನಾಥ್ ತನ್ನ ಪತ್ನಿ ಮಮತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಪತ್ನಿ ಮಮತಾ ಬಂದಿದ್ದಾರೆ. ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.
ಲೋಕನಾಥ್ ಹಾಗೂ ಮಮತಾ ಇಬ್ಬರಿಗೂ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಕಳೆದ ನಾಲ್ಕೈದ ದಿನದಿಂದಲೂ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ದಂಪತಿಗಳು ಆಗಾಗ್ಗೆ ವಿವಿಧ ವಿಷಯಗಳಿಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಸಂಬಂಧಿಕರು ಅವರ ನಡುವೆ ಮಾತುಕತೆ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ.
ಇಂದು ಕೂಡ ದಂಪತಿಗಳು ಭೂವಿವಾದ ಸಂಬಂಧ ಪರಸ್ಪರ ಜಗಳವಾಡಿದ್ದು ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಹೊಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪತಿ ಲೋಕನಾಥ್ ವಿರುದ್ಧ ಎಸ್ ಪಿಗೆ ದೂರು ನೀಡಲು ಮಮತಾ ಮುಂದಾಗಿದ್ದರು. ಈ ವಿಚಾರ ತಿಳಿದ ಲೋಕನಾಥ್ ಆಕೆಯನ್ನು ಮನೆಯಿಂದ ಮೋಟಾರ್ ಸೈಕಲ್ ನಲ್ಲಿ ಮಮತಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.
ಪತ್ನಿ ಎಸ್ ಪಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಅಕೆಯನ್ನು ಮನಸೋ ಇಚ್ಛೆ ಇರಿದಿದ್ದಾನೆ.
ಈ ವೇಳೆ ಮಮತಾರ ಹೊಟ್ಟೆ ಮತ್ತು ಎದೆಗೆ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಮಮತಾ ಅವರನ್ನು ಎಸ್ಪಿ ಕಚೇರಿ ಸಮೀಪವಿರುವ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.
ಇರಿತದ ಬಳಿಕ ಲೋಕನಾಥ್ ತನ್ನ ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಹಮ್ಮದ್ ಸುಜೀತಾ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪತ್ನಿ ಮಮತಾ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಟ್ಟಿದೆ. ಮಗಳನ್ನ ನೆನೆದು ಹೆತ್ತ ತಾಯಿ ಕಣ್ಣೀರಿಡುತ್ತಿದ್ದಾರೆ. ಕೊಲೆ ಆರೋಪಿ ಲೋಕನಾಥ್ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…