ಪತಿ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಹಾಸನ ನಗರ ಠಾಣೆಯ ಕಾನ್ಸ್ಟೆಬಲ್ ಲೋಕನಾಥ್ ತನ್ನ ಪತ್ನಿ ಮಮತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಪತ್ನಿ ಮಮತಾ ಬಂದಿದ್ದಾರೆ. ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.
ಲೋಕನಾಥ್ ಹಾಗೂ ಮಮತಾ ಇಬ್ಬರಿಗೂ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಕಳೆದ ನಾಲ್ಕೈದ ದಿನದಿಂದಲೂ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ದಂಪತಿಗಳು ಆಗಾಗ್ಗೆ ವಿವಿಧ ವಿಷಯಗಳಿಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಸಂಬಂಧಿಕರು ಅವರ ನಡುವೆ ಮಾತುಕತೆ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ.
ಇಂದು ಕೂಡ ದಂಪತಿಗಳು ಭೂವಿವಾದ ಸಂಬಂಧ ಪರಸ್ಪರ ಜಗಳವಾಡಿದ್ದು ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಹೊಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪತಿ ಲೋಕನಾಥ್ ವಿರುದ್ಧ ಎಸ್ ಪಿಗೆ ದೂರು ನೀಡಲು ಮಮತಾ ಮುಂದಾಗಿದ್ದರು. ಈ ವಿಚಾರ ತಿಳಿದ ಲೋಕನಾಥ್ ಆಕೆಯನ್ನು ಮನೆಯಿಂದ ಮೋಟಾರ್ ಸೈಕಲ್ ನಲ್ಲಿ ಮಮತಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.
ಪತ್ನಿ ಎಸ್ ಪಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಅಕೆಯನ್ನು ಮನಸೋ ಇಚ್ಛೆ ಇರಿದಿದ್ದಾನೆ.
ಈ ವೇಳೆ ಮಮತಾರ ಹೊಟ್ಟೆ ಮತ್ತು ಎದೆಗೆ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಮಮತಾ ಅವರನ್ನು ಎಸ್ಪಿ ಕಚೇರಿ ಸಮೀಪವಿರುವ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.
ಇರಿತದ ಬಳಿಕ ಲೋಕನಾಥ್ ತನ್ನ ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಹಮ್ಮದ್ ಸುಜೀತಾ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪತ್ನಿ ಮಮತಾ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಟ್ಟಿದೆ. ಮಗಳನ್ನ ನೆನೆದು ಹೆತ್ತ ತಾಯಿ ಕಣ್ಣೀರಿಡುತ್ತಿದ್ದಾರೆ. ಕೊಲೆ ಆರೋಪಿ ಲೋಕನಾಥ್ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…