Categories: ಹಾಸನ

ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನ ಚಾಕು ಇರಿದು ಕೊಂದ ಕಾನ್‌ಸ್ಟೆಬಲ್‌

ಪತಿ ವಿರುದ್ಧ ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್‌ ಲೋಕನಾಥ್ ತನ್ನ ಪತ್ನಿ ಮಮತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಪತ್ನಿ ಮಮತಾ ಬಂದಿದ್ದಾರೆ. ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್‌ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.

ಸದ್ಯ ಪತ್ನಿಯನ್ನು ಹತ್ಯೆ ಮಾಡಿದ ನಂತರ ಪರಾರಿಯಾಗಿದ್ದ ಲೋಕನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಲೋಕನಾಥ್ ಹಾಗೂ ಮಮತಾ ಇಬ್ಬರಿಗೂ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಕಳೆದ ನಾಲ್ಕೈದ ದಿನದಿಂದಲೂ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ದಂಪತಿಗಳು ಆಗಾಗ್ಗೆ ವಿವಿಧ ವಿಷಯಗಳಿಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಸಂಬಂಧಿಕರು ಅವರ ನಡುವೆ ಮಾತುಕತೆ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ.

ಇಂದು ಕೂಡ ದಂಪತಿಗಳು ಭೂವಿವಾದ ಸಂಬಂಧ ಪರಸ್ಪರ ಜಗಳವಾಡಿದ್ದು ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಹೊಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪತಿ ಲೋಕನಾಥ್ ವಿರುದ್ಧ ಎಸ್ ಪಿಗೆ ದೂರು ನೀಡಲು ಮಮತಾ ಮುಂದಾಗಿದ್ದರು. ಈ ವಿಚಾರ ತಿಳಿದ ಲೋಕನಾಥ್ ಆಕೆಯನ್ನು ಮನೆಯಿಂದ ಮೋಟಾರ್ ಸೈಕಲ್ ನಲ್ಲಿ ಮಮತಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.

ಪತ್ನಿ ಎಸ್ ಪಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಅಕೆಯನ್ನು ಮನಸೋ ಇಚ್ಛೆ ಇರಿದಿದ್ದಾನೆ.

ಈ ವೇಳೆ ಮಮತಾರ ಹೊಟ್ಟೆ ಮತ್ತು ಎದೆಗೆ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಮಮತಾ ಅವರನ್ನು ಎಸ್ಪಿ ಕಚೇರಿ ಸಮೀಪವಿರುವ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.

ಇರಿತದ ಬಳಿಕ ಲೋಕನಾಥ್ ತನ್ನ ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಹಮ್ಮದ್ ಸುಜೀತಾ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪತ್ನಿ ಮಮತಾ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಟ್ಟಿದೆ. ಮಗಳನ್ನ ನೆನೆದು ಹೆತ್ತ ತಾಯಿ ಕಣ್ಣೀರಿಡುತ್ತಿದ್ದಾರೆ. ಕೊಲೆ ಆರೋಪಿ ಲೋಕನಾಥ್ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago