Categories: ಹಾಸನ

ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನ ಚಾಕು ಇರಿದು ಕೊಂದ ಕಾನ್‌ಸ್ಟೆಬಲ್‌

ಪತಿ ವಿರುದ್ಧ ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್‌ ಲೋಕನಾಥ್ ತನ್ನ ಪತ್ನಿ ಮಮತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಪತ್ನಿ ಮಮತಾ ಬಂದಿದ್ದಾರೆ. ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್‌ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.

ಸದ್ಯ ಪತ್ನಿಯನ್ನು ಹತ್ಯೆ ಮಾಡಿದ ನಂತರ ಪರಾರಿಯಾಗಿದ್ದ ಲೋಕನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಲೋಕನಾಥ್ ಹಾಗೂ ಮಮತಾ ಇಬ್ಬರಿಗೂ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಕಳೆದ ನಾಲ್ಕೈದ ದಿನದಿಂದಲೂ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ದಂಪತಿಗಳು ಆಗಾಗ್ಗೆ ವಿವಿಧ ವಿಷಯಗಳಿಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಸಂಬಂಧಿಕರು ಅವರ ನಡುವೆ ಮಾತುಕತೆ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ.

ಇಂದು ಕೂಡ ದಂಪತಿಗಳು ಭೂವಿವಾದ ಸಂಬಂಧ ಪರಸ್ಪರ ಜಗಳವಾಡಿದ್ದು ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಹೊಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪತಿ ಲೋಕನಾಥ್ ವಿರುದ್ಧ ಎಸ್ ಪಿಗೆ ದೂರು ನೀಡಲು ಮಮತಾ ಮುಂದಾಗಿದ್ದರು. ಈ ವಿಚಾರ ತಿಳಿದ ಲೋಕನಾಥ್ ಆಕೆಯನ್ನು ಮನೆಯಿಂದ ಮೋಟಾರ್ ಸೈಕಲ್ ನಲ್ಲಿ ಮಮತಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.

ಪತ್ನಿ ಎಸ್ ಪಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಅಕೆಯನ್ನು ಮನಸೋ ಇಚ್ಛೆ ಇರಿದಿದ್ದಾನೆ.

ಈ ವೇಳೆ ಮಮತಾರ ಹೊಟ್ಟೆ ಮತ್ತು ಎದೆಗೆ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಮಮತಾ ಅವರನ್ನು ಎಸ್ಪಿ ಕಚೇರಿ ಸಮೀಪವಿರುವ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.

ಇರಿತದ ಬಳಿಕ ಲೋಕನಾಥ್ ತನ್ನ ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಹಮ್ಮದ್ ಸುಜೀತಾ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪತ್ನಿ ಮಮತಾ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಟ್ಟಿದೆ. ಮಗಳನ್ನ ನೆನೆದು ಹೆತ್ತ ತಾಯಿ ಕಣ್ಣೀರಿಡುತ್ತಿದ್ದಾರೆ. ಕೊಲೆ ಆರೋಪಿ ಲೋಕನಾಥ್ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago