Categories: ಹಾಸನ

ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನ ಚಾಕು ಇರಿದು ಕೊಂದ ಕಾನ್‌ಸ್ಟೆಬಲ್‌

ಪತಿ ವಿರುದ್ಧ ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್‌ ಲೋಕನಾಥ್ ತನ್ನ ಪತ್ನಿ ಮಮತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಪತ್ನಿ ಮಮತಾ ಬಂದಿದ್ದಾರೆ. ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್‌ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.

ಸದ್ಯ ಪತ್ನಿಯನ್ನು ಹತ್ಯೆ ಮಾಡಿದ ನಂತರ ಪರಾರಿಯಾಗಿದ್ದ ಲೋಕನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಲೋಕನಾಥ್ ಹಾಗೂ ಮಮತಾ ಇಬ್ಬರಿಗೂ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಕಳೆದ ನಾಲ್ಕೈದ ದಿನದಿಂದಲೂ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ದಂಪತಿಗಳು ಆಗಾಗ್ಗೆ ವಿವಿಧ ವಿಷಯಗಳಿಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಸಂಬಂಧಿಕರು ಅವರ ನಡುವೆ ಮಾತುಕತೆ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ.

ಇಂದು ಕೂಡ ದಂಪತಿಗಳು ಭೂವಿವಾದ ಸಂಬಂಧ ಪರಸ್ಪರ ಜಗಳವಾಡಿದ್ದು ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಹೊಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪತಿ ಲೋಕನಾಥ್ ವಿರುದ್ಧ ಎಸ್ ಪಿಗೆ ದೂರು ನೀಡಲು ಮಮತಾ ಮುಂದಾಗಿದ್ದರು. ಈ ವಿಚಾರ ತಿಳಿದ ಲೋಕನಾಥ್ ಆಕೆಯನ್ನು ಮನೆಯಿಂದ ಮೋಟಾರ್ ಸೈಕಲ್ ನಲ್ಲಿ ಮಮತಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.

ಪತ್ನಿ ಎಸ್ ಪಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಅಕೆಯನ್ನು ಮನಸೋ ಇಚ್ಛೆ ಇರಿದಿದ್ದಾನೆ.

ಈ ವೇಳೆ ಮಮತಾರ ಹೊಟ್ಟೆ ಮತ್ತು ಎದೆಗೆ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಮಮತಾ ಅವರನ್ನು ಎಸ್ಪಿ ಕಚೇರಿ ಸಮೀಪವಿರುವ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.

ಇರಿತದ ಬಳಿಕ ಲೋಕನಾಥ್ ತನ್ನ ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಹಮ್ಮದ್ ಸುಜೀತಾ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪತ್ನಿ ಮಮತಾ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಟ್ಟಿದೆ. ಮಗಳನ್ನ ನೆನೆದು ಹೆತ್ತ ತಾಯಿ ಕಣ್ಣೀರಿಡುತ್ತಿದ್ದಾರೆ. ಕೊಲೆ ಆರೋಪಿ ಲೋಕನಾಥ್ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

Ramesh Babu

Journalist

Recent Posts

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

4 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

6 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

1 day ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 days ago