Categories: ಹಾಸನ

ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನ ಚಾಕು ಇರಿದು ಕೊಂದ ಕಾನ್‌ಸ್ಟೆಬಲ್‌

ಪತಿ ವಿರುದ್ಧ ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್‌ ಲೋಕನಾಥ್ ತನ್ನ ಪತ್ನಿ ಮಮತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಪತ್ನಿ ಮಮತಾ ಬಂದಿದ್ದಾರೆ. ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್‌ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.

ಸದ್ಯ ಪತ್ನಿಯನ್ನು ಹತ್ಯೆ ಮಾಡಿದ ನಂತರ ಪರಾರಿಯಾಗಿದ್ದ ಲೋಕನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಲೋಕನಾಥ್ ಹಾಗೂ ಮಮತಾ ಇಬ್ಬರಿಗೂ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಕಳೆದ ನಾಲ್ಕೈದ ದಿನದಿಂದಲೂ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ದಂಪತಿಗಳು ಆಗಾಗ್ಗೆ ವಿವಿಧ ವಿಷಯಗಳಿಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಸಂಬಂಧಿಕರು ಅವರ ನಡುವೆ ಮಾತುಕತೆ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ.

ಇಂದು ಕೂಡ ದಂಪತಿಗಳು ಭೂವಿವಾದ ಸಂಬಂಧ ಪರಸ್ಪರ ಜಗಳವಾಡಿದ್ದು ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಹೊಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪತಿ ಲೋಕನಾಥ್ ವಿರುದ್ಧ ಎಸ್ ಪಿಗೆ ದೂರು ನೀಡಲು ಮಮತಾ ಮುಂದಾಗಿದ್ದರು. ಈ ವಿಚಾರ ತಿಳಿದ ಲೋಕನಾಥ್ ಆಕೆಯನ್ನು ಮನೆಯಿಂದ ಮೋಟಾರ್ ಸೈಕಲ್ ನಲ್ಲಿ ಮಮತಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.

ಪತ್ನಿ ಎಸ್ ಪಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಅಕೆಯನ್ನು ಮನಸೋ ಇಚ್ಛೆ ಇರಿದಿದ್ದಾನೆ.

ಈ ವೇಳೆ ಮಮತಾರ ಹೊಟ್ಟೆ ಮತ್ತು ಎದೆಗೆ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಮಮತಾ ಅವರನ್ನು ಎಸ್ಪಿ ಕಚೇರಿ ಸಮೀಪವಿರುವ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.

ಇರಿತದ ಬಳಿಕ ಲೋಕನಾಥ್ ತನ್ನ ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಹಮ್ಮದ್ ಸುಜೀತಾ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪತ್ನಿ ಮಮತಾ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಟ್ಟಿದೆ. ಮಗಳನ್ನ ನೆನೆದು ಹೆತ್ತ ತಾಯಿ ಕಣ್ಣೀರಿಡುತ್ತಿದ್ದಾರೆ. ಕೊಲೆ ಆರೋಪಿ ಲೋಕನಾಥ್ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

10 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

11 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

11 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

11 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

13 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

17 hours ago