ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ ಲಾರಿಗಳು ದೊಡ್ಡಬಳ್ಳಾಪುರದ ಎಂಎಸ್ ಜಿಪಿ ಘಟಕದತ್ತ ಮುಖಮಾಡಿದ್ದವು. ವಿಷಯ ತಿಳಿದ ಇಲ್ಲಿನ ಸುತ್ತಮುತ್ತಲಿಮ ಗ್ರಾಮಸ್ಥರು ಹೆಚ್ಚುವರಿಯಾಗಿ ಬಂದ ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದರು. ಗ್ರಾಮಸ್ಥರಿಗೆ ಶಾಸಕ ಧೀರಜ್ ಮುನಿರಾಜು ಕೂಡ ಸಾಥ್ ನೀಡಿ ಕಸದ ಲಾರಿಗಳನ್ನು ವಾಪಸ್ ಕಳಿಸುವಲ್ಲಿ ಯಶಸ್ವಿಯಾಗಿದ್ದರು.

ಬುಧವಾರ ಕೂಡ ನಿಗದಿತ 70 ಲಾರಿಗಳು ಬಿಟ್ಟು ಹೆಚ್ಚುವರಿ ಲಾರಿಗಳು ಬರುವ ಆತಂಕದಿಂದ ಇಲ್ಲಿನ ಗ್ರಾಮಸ್ಥರು ಎಂಎಸ್ಜಿಪಿ ಘಟಕದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರು. ಇಡೀ ದಿನ ಗ್ರಾಮಸ್ಥರು ಬಂದು ಹೋಗುವ ಲಾರಿಗಳ ಮೇಲೆ ನಿಗಾವಹಿಸಿದ್ದರು.

ಸ್ಥಳಕ್ಕೆ ಡಿವೈಎಸ್ಪಿ ಬೇಟಿ ಪರಿಶೀಲನೆ:

ಎಂಎಸ್ ಜಿಪಿ ಘಟಕದ ಬಳಿಯ ಚಿಕ್ಕಮಂಕಳಾಲದ ಬಳಿ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಲಾಯಿತು. ಎಂಎಸ್ಜಿಪಿ ಘಟಕದ ಲಾರಿಗಳ ದಾಖಲಾತಿಗಳನ್ನ ಪರಿಶೀಲಿಸಿ ಒಳಗೆ ಬಿಡಲಾಯಿತು. ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ದೊಡ್ಡಬೆಳವಂಗಲ ಹೋಬಳಿ ಇನ್ಸ್ಪೆಕ್ಟರ್ ಕಲ್ಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಂಎಸ್ಜಿಪಿ ಘಟಕದ ಎಂ.ಡಿ ಪ್ರವೀಣ್ ಗೌಡ ಜೊತೆ ಡಿವೈಎಸ್ಪಿ ಪಾಂಡುರಂಗ ದೂರವಾಣಿ ಕರೆ ಮಾಡಿ ಲಾರಿಗಳ ಸಂಖ್ಯೆ, ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಬಳಿಕ ಹೆಚ್ಚುವರಿ ಲಾರಿಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿ ಎಚ್ಚರಿಕೆ ನೀಡಿದರು. ಸ್ಥಳದಲ್ಲಿ ಎಎಸ್ಐ ನೇತೃತ್ವದಲ್ಲಿ ಬಿಗಿ ಭದ್ರತೆಗೆ ಸೂಚಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕ ಧೀರಜ್ ತಿರುಗೇಟು:

ಅನುದಾನ ನೀಡಿಲ್ಲವೆಂದು ಹೇಳಿ ಕಸದ ಲಾರಿಗಳಿಗೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶಾಸಕ ಧೀರಜ್ ಮುನಿರಾಜು ಸವಾಲು ಹಾಕಿದ್ದಾರೆ. ದೊಡ್ಡಬಳ್ಳಾಪುರಕ್ಕೆ ಕಸದ ಘಟಕದ ಪರಿಣಾಮವಾಗಿ 10 ಕೋಟಿ ಕಸದ ಅನುದಾನವನ್ನ ಮೀಸಲಿರಿಸಿದ್ದಾರೆ. ಆದರೆ ನಾನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದಂತೆ ಅನುದಾನಕ್ಕೆ ಬೇಡಿಕೆ ಇಟ್ಟಿಲ್ಲ. ಕೇಳಿಲ್ಲ.. ಮುಂದೆಯೂ ಕೇಳಲ್ಲ.. ಇದರ ಬಗ್ಗೆ ನನ್ನ ಮನವಿ ಪತ್ರವಾಗಲಿ, ದೂರವಾಣಿ ಕರೆ ದಾಖಲೆಗಳಾಗಲಿ ಇದ್ದರೆ ಬಿಡುಗಡೆ ಮಾಡಲಿ ನಾನು ಸಿದ್ಧ, ಒಟ್ಟಾರೆ ನನಗೆ ಆ ಅನುದಾನವೂ ಬೇಡ. ಕಸದ ಘಟಕವೂ ಬೇಡ ಎಂದಿದ್ದಾರೆ.

ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ಧ:

ನಿನ್ನೆ ಅಂದಾಜು ಮಹದೇವಪುರ, ಬ್ಯಾಟರಾಯನಪುರದ ೪೦೦ ಕಸದ ಲಾರಿಗಳನ್ನು ವಾಪಸ್ ಕಳಿಸಿದ್ದೇನೆ. ತಾಲ್ಲೂಕಿಗೆ ಕಸವೂ ಬೇಡ.. ಕಸದ ಅನುದಾನವೂ ಬೇಡ.. ಜನರ ಪರ ನಿಂತು ಹೋರಾಟ ಮಾಡುತ್ತೇನೆ. ನೀವು ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ದ. ಏನೇ ಬೆದರಿಕೆ ಹಾಕಿದರೂ ಸಿದ್ದ, ನನ್ನ ಮನೆ ಮೇಲೆ ಕಸ ಸುರಿದರೂ ನಾನು ಸಿದ್ಧನಿದ್ದೇನೆ. ಜನರ ಪರವಾಗಿ ಯಾವುದೇ ಹೋರಾಟಕ್ಕೆ ಸಿದ್ದನಿದ್ದೇನೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ಕಸದ ಘಟಕದಿಂದಾಗಿ ಈ ಭಾಗದ ಎರಡು ಗ್ರಾಮ ಪಂಚಾಯ್ತಿಗಳ ಪ್ರದೇಶದಲ್ಲಿ ನೆಲ, ಜಲ, ವಾಯು ಸಂಪೂರ್ಣ ಕಲುಷಿತಗೊಂಡಿದೆ. ಈ ಭಾಗದ ಜನರು ಅನೇಕ ರೋಗ ರುಜಿನಗಳಿಗೆ ತುತ್ತಾಗಿದ್ದಾರೆ. ಜಾನುವಾರು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದಕ್ಕೆಲ್ಲ ಯಾರು ಹೊಣೆ. ಜನರು ಘಟಕವನ್ನು ಸ್ಥಗಿತಗೊಳಿಸಲು ಅಧಿಕಾರ ನೀಡಿದ್ದಾರೆ. ಜನರ ಪರವಾಗಿ ನಿಲ್ಲುತ್ತೇನೆ. ಕಸವನ್ನು ಸುರಿಯುವುದಿದ್ದರೆ ಆರ್. ಆಶೋಕ್, ಬಿ.ವೈ ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆ ಏಕೆ ನನ್ನ ಮನೆ ಮುಂದೆಯೇ ಸುರಿಯಲಿ. ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ ಹೋರಾಟಕ್ಕೆ ಸಿದ್ದ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದ್ದಾರೆ.

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

24 minutes ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

12 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

13 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

20 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago