ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ ಲಾರಿಗಳು ದೊಡ್ಡಬಳ್ಳಾಪುರದ ಎಂಎಸ್ ಜಿಪಿ ಘಟಕದತ್ತ ಮುಖಮಾಡಿದ್ದವು. ವಿಷಯ ತಿಳಿದ ಇಲ್ಲಿನ ಸುತ್ತಮುತ್ತಲಿಮ ಗ್ರಾಮಸ್ಥರು ಹೆಚ್ಚುವರಿಯಾಗಿ ಬಂದ ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದರು. ಗ್ರಾಮಸ್ಥರಿಗೆ ಶಾಸಕ ಧೀರಜ್ ಮುನಿರಾಜು ಕೂಡ ಸಾಥ್ ನೀಡಿ ಕಸದ ಲಾರಿಗಳನ್ನು ವಾಪಸ್ ಕಳಿಸುವಲ್ಲಿ ಯಶಸ್ವಿಯಾಗಿದ್ದರು.

ಬುಧವಾರ ಕೂಡ ನಿಗದಿತ 70 ಲಾರಿಗಳು ಬಿಟ್ಟು ಹೆಚ್ಚುವರಿ ಲಾರಿಗಳು ಬರುವ ಆತಂಕದಿಂದ ಇಲ್ಲಿನ ಗ್ರಾಮಸ್ಥರು ಎಂಎಸ್ಜಿಪಿ ಘಟಕದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರು. ಇಡೀ ದಿನ ಗ್ರಾಮಸ್ಥರು ಬಂದು ಹೋಗುವ ಲಾರಿಗಳ ಮೇಲೆ ನಿಗಾವಹಿಸಿದ್ದರು.

ಸ್ಥಳಕ್ಕೆ ಡಿವೈಎಸ್ಪಿ ಬೇಟಿ ಪರಿಶೀಲನೆ:

ಎಂಎಸ್ ಜಿಪಿ ಘಟಕದ ಬಳಿಯ ಚಿಕ್ಕಮಂಕಳಾಲದ ಬಳಿ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಲಾಯಿತು. ಎಂಎಸ್ಜಿಪಿ ಘಟಕದ ಲಾರಿಗಳ ದಾಖಲಾತಿಗಳನ್ನ ಪರಿಶೀಲಿಸಿ ಒಳಗೆ ಬಿಡಲಾಯಿತು. ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ದೊಡ್ಡಬೆಳವಂಗಲ ಹೋಬಳಿ ಇನ್ಸ್ಪೆಕ್ಟರ್ ಕಲ್ಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಂಎಸ್ಜಿಪಿ ಘಟಕದ ಎಂ.ಡಿ ಪ್ರವೀಣ್ ಗೌಡ ಜೊತೆ ಡಿವೈಎಸ್ಪಿ ಪಾಂಡುರಂಗ ದೂರವಾಣಿ ಕರೆ ಮಾಡಿ ಲಾರಿಗಳ ಸಂಖ್ಯೆ, ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಬಳಿಕ ಹೆಚ್ಚುವರಿ ಲಾರಿಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿ ಎಚ್ಚರಿಕೆ ನೀಡಿದರು. ಸ್ಥಳದಲ್ಲಿ ಎಎಸ್ಐ ನೇತೃತ್ವದಲ್ಲಿ ಬಿಗಿ ಭದ್ರತೆಗೆ ಸೂಚಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕ ಧೀರಜ್ ತಿರುಗೇಟು:

ಅನುದಾನ ನೀಡಿಲ್ಲವೆಂದು ಹೇಳಿ ಕಸದ ಲಾರಿಗಳಿಗೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶಾಸಕ ಧೀರಜ್ ಮುನಿರಾಜು ಸವಾಲು ಹಾಕಿದ್ದಾರೆ. ದೊಡ್ಡಬಳ್ಳಾಪುರಕ್ಕೆ ಕಸದ ಘಟಕದ ಪರಿಣಾಮವಾಗಿ 10 ಕೋಟಿ ಕಸದ ಅನುದಾನವನ್ನ ಮೀಸಲಿರಿಸಿದ್ದಾರೆ. ಆದರೆ ನಾನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದಂತೆ ಅನುದಾನಕ್ಕೆ ಬೇಡಿಕೆ ಇಟ್ಟಿಲ್ಲ. ಕೇಳಿಲ್ಲ.. ಮುಂದೆಯೂ ಕೇಳಲ್ಲ.. ಇದರ ಬಗ್ಗೆ ನನ್ನ ಮನವಿ ಪತ್ರವಾಗಲಿ, ದೂರವಾಣಿ ಕರೆ ದಾಖಲೆಗಳಾಗಲಿ ಇದ್ದರೆ ಬಿಡುಗಡೆ ಮಾಡಲಿ ನಾನು ಸಿದ್ಧ, ಒಟ್ಟಾರೆ ನನಗೆ ಆ ಅನುದಾನವೂ ಬೇಡ. ಕಸದ ಘಟಕವೂ ಬೇಡ ಎಂದಿದ್ದಾರೆ.

ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ಧ:

ನಿನ್ನೆ ಅಂದಾಜು ಮಹದೇವಪುರ, ಬ್ಯಾಟರಾಯನಪುರದ ೪೦೦ ಕಸದ ಲಾರಿಗಳನ್ನು ವಾಪಸ್ ಕಳಿಸಿದ್ದೇನೆ. ತಾಲ್ಲೂಕಿಗೆ ಕಸವೂ ಬೇಡ.. ಕಸದ ಅನುದಾನವೂ ಬೇಡ.. ಜನರ ಪರ ನಿಂತು ಹೋರಾಟ ಮಾಡುತ್ತೇನೆ. ನೀವು ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ದ. ಏನೇ ಬೆದರಿಕೆ ಹಾಕಿದರೂ ಸಿದ್ದ, ನನ್ನ ಮನೆ ಮೇಲೆ ಕಸ ಸುರಿದರೂ ನಾನು ಸಿದ್ಧನಿದ್ದೇನೆ. ಜನರ ಪರವಾಗಿ ಯಾವುದೇ ಹೋರಾಟಕ್ಕೆ ಸಿದ್ದನಿದ್ದೇನೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ಕಸದ ಘಟಕದಿಂದಾಗಿ ಈ ಭಾಗದ ಎರಡು ಗ್ರಾಮ ಪಂಚಾಯ್ತಿಗಳ ಪ್ರದೇಶದಲ್ಲಿ ನೆಲ, ಜಲ, ವಾಯು ಸಂಪೂರ್ಣ ಕಲುಷಿತಗೊಂಡಿದೆ. ಈ ಭಾಗದ ಜನರು ಅನೇಕ ರೋಗ ರುಜಿನಗಳಿಗೆ ತುತ್ತಾಗಿದ್ದಾರೆ. ಜಾನುವಾರು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದಕ್ಕೆಲ್ಲ ಯಾರು ಹೊಣೆ. ಜನರು ಘಟಕವನ್ನು ಸ್ಥಗಿತಗೊಳಿಸಲು ಅಧಿಕಾರ ನೀಡಿದ್ದಾರೆ. ಜನರ ಪರವಾಗಿ ನಿಲ್ಲುತ್ತೇನೆ. ಕಸವನ್ನು ಸುರಿಯುವುದಿದ್ದರೆ ಆರ್. ಆಶೋಕ್, ಬಿ.ವೈ ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆ ಏಕೆ ನನ್ನ ಮನೆ ಮುಂದೆಯೇ ಸುರಿಯಲಿ. ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ ಹೋರಾಟಕ್ಕೆ ಸಿದ್ದ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದ್ದಾರೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

48 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

22 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago