ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ ಲಾರಿಗಳು ದೊಡ್ಡಬಳ್ಳಾಪುರದ ಎಂಎಸ್ ಜಿಪಿ ಘಟಕದತ್ತ ಮುಖಮಾಡಿದ್ದವು. ವಿಷಯ ತಿಳಿದ ಇಲ್ಲಿನ ಸುತ್ತಮುತ್ತಲಿಮ ಗ್ರಾಮಸ್ಥರು ಹೆಚ್ಚುವರಿಯಾಗಿ ಬಂದ ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದರು. ಗ್ರಾಮಸ್ಥರಿಗೆ ಶಾಸಕ ಧೀರಜ್ ಮುನಿರಾಜು ಕೂಡ ಸಾಥ್ ನೀಡಿ ಕಸದ ಲಾರಿಗಳನ್ನು ವಾಪಸ್ ಕಳಿಸುವಲ್ಲಿ ಯಶಸ್ವಿಯಾಗಿದ್ದರು.

ಬುಧವಾರ ಕೂಡ ನಿಗದಿತ 70 ಲಾರಿಗಳು ಬಿಟ್ಟು ಹೆಚ್ಚುವರಿ ಲಾರಿಗಳು ಬರುವ ಆತಂಕದಿಂದ ಇಲ್ಲಿನ ಗ್ರಾಮಸ್ಥರು ಎಂಎಸ್ಜಿಪಿ ಘಟಕದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರು. ಇಡೀ ದಿನ ಗ್ರಾಮಸ್ಥರು ಬಂದು ಹೋಗುವ ಲಾರಿಗಳ ಮೇಲೆ ನಿಗಾವಹಿಸಿದ್ದರು.

ಸ್ಥಳಕ್ಕೆ ಡಿವೈಎಸ್ಪಿ ಬೇಟಿ ಪರಿಶೀಲನೆ:

ಎಂಎಸ್ ಜಿಪಿ ಘಟಕದ ಬಳಿಯ ಚಿಕ್ಕಮಂಕಳಾಲದ ಬಳಿ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಲಾಯಿತು. ಎಂಎಸ್ಜಿಪಿ ಘಟಕದ ಲಾರಿಗಳ ದಾಖಲಾತಿಗಳನ್ನ ಪರಿಶೀಲಿಸಿ ಒಳಗೆ ಬಿಡಲಾಯಿತು. ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ದೊಡ್ಡಬೆಳವಂಗಲ ಹೋಬಳಿ ಇನ್ಸ್ಪೆಕ್ಟರ್ ಕಲ್ಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಂಎಸ್ಜಿಪಿ ಘಟಕದ ಎಂ.ಡಿ ಪ್ರವೀಣ್ ಗೌಡ ಜೊತೆ ಡಿವೈಎಸ್ಪಿ ಪಾಂಡುರಂಗ ದೂರವಾಣಿ ಕರೆ ಮಾಡಿ ಲಾರಿಗಳ ಸಂಖ್ಯೆ, ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಬಳಿಕ ಹೆಚ್ಚುವರಿ ಲಾರಿಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿ ಎಚ್ಚರಿಕೆ ನೀಡಿದರು. ಸ್ಥಳದಲ್ಲಿ ಎಎಸ್ಐ ನೇತೃತ್ವದಲ್ಲಿ ಬಿಗಿ ಭದ್ರತೆಗೆ ಸೂಚಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕ ಧೀರಜ್ ತಿರುಗೇಟು:

ಅನುದಾನ ನೀಡಿಲ್ಲವೆಂದು ಹೇಳಿ ಕಸದ ಲಾರಿಗಳಿಗೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶಾಸಕ ಧೀರಜ್ ಮುನಿರಾಜು ಸವಾಲು ಹಾಕಿದ್ದಾರೆ. ದೊಡ್ಡಬಳ್ಳಾಪುರಕ್ಕೆ ಕಸದ ಘಟಕದ ಪರಿಣಾಮವಾಗಿ 10 ಕೋಟಿ ಕಸದ ಅನುದಾನವನ್ನ ಮೀಸಲಿರಿಸಿದ್ದಾರೆ. ಆದರೆ ನಾನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದಂತೆ ಅನುದಾನಕ್ಕೆ ಬೇಡಿಕೆ ಇಟ್ಟಿಲ್ಲ. ಕೇಳಿಲ್ಲ.. ಮುಂದೆಯೂ ಕೇಳಲ್ಲ.. ಇದರ ಬಗ್ಗೆ ನನ್ನ ಮನವಿ ಪತ್ರವಾಗಲಿ, ದೂರವಾಣಿ ಕರೆ ದಾಖಲೆಗಳಾಗಲಿ ಇದ್ದರೆ ಬಿಡುಗಡೆ ಮಾಡಲಿ ನಾನು ಸಿದ್ಧ, ಒಟ್ಟಾರೆ ನನಗೆ ಆ ಅನುದಾನವೂ ಬೇಡ. ಕಸದ ಘಟಕವೂ ಬೇಡ ಎಂದಿದ್ದಾರೆ.

ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ಧ:

ನಿನ್ನೆ ಅಂದಾಜು ಮಹದೇವಪುರ, ಬ್ಯಾಟರಾಯನಪುರದ ೪೦೦ ಕಸದ ಲಾರಿಗಳನ್ನು ವಾಪಸ್ ಕಳಿಸಿದ್ದೇನೆ. ತಾಲ್ಲೂಕಿಗೆ ಕಸವೂ ಬೇಡ.. ಕಸದ ಅನುದಾನವೂ ಬೇಡ.. ಜನರ ಪರ ನಿಂತು ಹೋರಾಟ ಮಾಡುತ್ತೇನೆ. ನೀವು ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ದ. ಏನೇ ಬೆದರಿಕೆ ಹಾಕಿದರೂ ಸಿದ್ದ, ನನ್ನ ಮನೆ ಮೇಲೆ ಕಸ ಸುರಿದರೂ ನಾನು ಸಿದ್ಧನಿದ್ದೇನೆ. ಜನರ ಪರವಾಗಿ ಯಾವುದೇ ಹೋರಾಟಕ್ಕೆ ಸಿದ್ದನಿದ್ದೇನೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ಕಸದ ಘಟಕದಿಂದಾಗಿ ಈ ಭಾಗದ ಎರಡು ಗ್ರಾಮ ಪಂಚಾಯ್ತಿಗಳ ಪ್ರದೇಶದಲ್ಲಿ ನೆಲ, ಜಲ, ವಾಯು ಸಂಪೂರ್ಣ ಕಲುಷಿತಗೊಂಡಿದೆ. ಈ ಭಾಗದ ಜನರು ಅನೇಕ ರೋಗ ರುಜಿನಗಳಿಗೆ ತುತ್ತಾಗಿದ್ದಾರೆ. ಜಾನುವಾರು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದಕ್ಕೆಲ್ಲ ಯಾರು ಹೊಣೆ. ಜನರು ಘಟಕವನ್ನು ಸ್ಥಗಿತಗೊಳಿಸಲು ಅಧಿಕಾರ ನೀಡಿದ್ದಾರೆ. ಜನರ ಪರವಾಗಿ ನಿಲ್ಲುತ್ತೇನೆ. ಕಸವನ್ನು ಸುರಿಯುವುದಿದ್ದರೆ ಆರ್. ಆಶೋಕ್, ಬಿ.ವೈ ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆ ಏಕೆ ನನ್ನ ಮನೆ ಮುಂದೆಯೇ ಸುರಿಯಲಿ. ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ ಹೋರಾಟಕ್ಕೆ ಸಿದ್ದ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

8 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

11 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

23 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago