ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ ಲಾರಿಗಳು ದೊಡ್ಡಬಳ್ಳಾಪುರದ ಎಂಎಸ್ ಜಿಪಿ ಘಟಕದತ್ತ ಮುಖಮಾಡಿದ್ದವು. ವಿಷಯ ತಿಳಿದ ಇಲ್ಲಿನ ಸುತ್ತಮುತ್ತಲಿಮ ಗ್ರಾಮಸ್ಥರು ಹೆಚ್ಚುವರಿಯಾಗಿ ಬಂದ ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದರು. ಗ್ರಾಮಸ್ಥರಿಗೆ ಶಾಸಕ ಧೀರಜ್ ಮುನಿರಾಜು ಕೂಡ ಸಾಥ್ ನೀಡಿ ಕಸದ ಲಾರಿಗಳನ್ನು ವಾಪಸ್ ಕಳಿಸುವಲ್ಲಿ ಯಶಸ್ವಿಯಾಗಿದ್ದರು.
ಬುಧವಾರ ಕೂಡ ನಿಗದಿತ 70 ಲಾರಿಗಳು ಬಿಟ್ಟು ಹೆಚ್ಚುವರಿ ಲಾರಿಗಳು ಬರುವ ಆತಂಕದಿಂದ ಇಲ್ಲಿನ ಗ್ರಾಮಸ್ಥರು ಎಂಎಸ್ಜಿಪಿ ಘಟಕದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರು. ಇಡೀ ದಿನ ಗ್ರಾಮಸ್ಥರು ಬಂದು ಹೋಗುವ ಲಾರಿಗಳ ಮೇಲೆ ನಿಗಾವಹಿಸಿದ್ದರು.
ಸ್ಥಳಕ್ಕೆ ಡಿವೈಎಸ್ಪಿ ಬೇಟಿ ಪರಿಶೀಲನೆ:
ಎಂಎಸ್ ಜಿಪಿ ಘಟಕದ ಬಳಿಯ ಚಿಕ್ಕಮಂಕಳಾಲದ ಬಳಿ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಲಾಯಿತು. ಎಂಎಸ್ಜಿಪಿ ಘಟಕದ ಲಾರಿಗಳ ದಾಖಲಾತಿಗಳನ್ನ ಪರಿಶೀಲಿಸಿ ಒಳಗೆ ಬಿಡಲಾಯಿತು. ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ದೊಡ್ಡಬೆಳವಂಗಲ ಹೋಬಳಿ ಇನ್ಸ್ಪೆಕ್ಟರ್ ಕಲ್ಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಂಎಸ್ಜಿಪಿ ಘಟಕದ ಎಂ.ಡಿ ಪ್ರವೀಣ್ ಗೌಡ ಜೊತೆ ಡಿವೈಎಸ್ಪಿ ಪಾಂಡುರಂಗ ದೂರವಾಣಿ ಕರೆ ಮಾಡಿ ಲಾರಿಗಳ ಸಂಖ್ಯೆ, ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಬಳಿಕ ಹೆಚ್ಚುವರಿ ಲಾರಿಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿ ಎಚ್ಚರಿಕೆ ನೀಡಿದರು. ಸ್ಥಳದಲ್ಲಿ ಎಎಸ್ಐ ನೇತೃತ್ವದಲ್ಲಿ ಬಿಗಿ ಭದ್ರತೆಗೆ ಸೂಚಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕ ಧೀರಜ್ ತಿರುಗೇಟು:
ಅನುದಾನ ನೀಡಿಲ್ಲವೆಂದು ಹೇಳಿ ಕಸದ ಲಾರಿಗಳಿಗೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶಾಸಕ ಧೀರಜ್ ಮುನಿರಾಜು ಸವಾಲು ಹಾಕಿದ್ದಾರೆ. ದೊಡ್ಡಬಳ್ಳಾಪುರಕ್ಕೆ ಕಸದ ಘಟಕದ ಪರಿಣಾಮವಾಗಿ 10 ಕೋಟಿ ಕಸದ ಅನುದಾನವನ್ನ ಮೀಸಲಿರಿಸಿದ್ದಾರೆ. ಆದರೆ ನಾನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದಂತೆ ಅನುದಾನಕ್ಕೆ ಬೇಡಿಕೆ ಇಟ್ಟಿಲ್ಲ. ಕೇಳಿಲ್ಲ.. ಮುಂದೆಯೂ ಕೇಳಲ್ಲ.. ಇದರ ಬಗ್ಗೆ ನನ್ನ ಮನವಿ ಪತ್ರವಾಗಲಿ, ದೂರವಾಣಿ ಕರೆ ದಾಖಲೆಗಳಾಗಲಿ ಇದ್ದರೆ ಬಿಡುಗಡೆ ಮಾಡಲಿ ನಾನು ಸಿದ್ಧ, ಒಟ್ಟಾರೆ ನನಗೆ ಆ ಅನುದಾನವೂ ಬೇಡ. ಕಸದ ಘಟಕವೂ ಬೇಡ ಎಂದಿದ್ದಾರೆ.
ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ಧ:
ನಿನ್ನೆ ಅಂದಾಜು ಮಹದೇವಪುರ, ಬ್ಯಾಟರಾಯನಪುರದ ೪೦೦ ಕಸದ ಲಾರಿಗಳನ್ನು ವಾಪಸ್ ಕಳಿಸಿದ್ದೇನೆ. ತಾಲ್ಲೂಕಿಗೆ ಕಸವೂ ಬೇಡ.. ಕಸದ ಅನುದಾನವೂ ಬೇಡ.. ಜನರ ಪರ ನಿಂತು ಹೋರಾಟ ಮಾಡುತ್ತೇನೆ. ನೀವು ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ದ. ಏನೇ ಬೆದರಿಕೆ ಹಾಕಿದರೂ ಸಿದ್ದ, ನನ್ನ ಮನೆ ಮೇಲೆ ಕಸ ಸುರಿದರೂ ನಾನು ಸಿದ್ಧನಿದ್ದೇನೆ. ಜನರ ಪರವಾಗಿ ಯಾವುದೇ ಹೋರಾಟಕ್ಕೆ ಸಿದ್ದನಿದ್ದೇನೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ಕಸದ ಘಟಕದಿಂದಾಗಿ ಈ ಭಾಗದ ಎರಡು ಗ್ರಾಮ ಪಂಚಾಯ್ತಿಗಳ ಪ್ರದೇಶದಲ್ಲಿ ನೆಲ, ಜಲ, ವಾಯು ಸಂಪೂರ್ಣ ಕಲುಷಿತಗೊಂಡಿದೆ. ಈ ಭಾಗದ ಜನರು ಅನೇಕ ರೋಗ ರುಜಿನಗಳಿಗೆ ತುತ್ತಾಗಿದ್ದಾರೆ. ಜಾನುವಾರು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದಕ್ಕೆಲ್ಲ ಯಾರು ಹೊಣೆ. ಜನರು ಘಟಕವನ್ನು ಸ್ಥಗಿತಗೊಳಿಸಲು ಅಧಿಕಾರ ನೀಡಿದ್ದಾರೆ. ಜನರ ಪರವಾಗಿ ನಿಲ್ಲುತ್ತೇನೆ. ಕಸವನ್ನು ಸುರಿಯುವುದಿದ್ದರೆ ಆರ್. ಆಶೋಕ್, ಬಿ.ವೈ ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆ ಏಕೆ ನನ್ನ ಮನೆ ಮುಂದೆಯೇ ಸುರಿಯಲಿ. ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ ಹೋರಾಟಕ್ಕೆ ಸಿದ್ದ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…