ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ ಲಾರಿಗಳು ದೊಡ್ಡಬಳ್ಳಾಪುರದ ಎಂಎಸ್ ಜಿಪಿ ಘಟಕದತ್ತ ಮುಖಮಾಡಿದ್ದವು. ವಿಷಯ ತಿಳಿದ ಇಲ್ಲಿನ ಸುತ್ತಮುತ್ತಲಿಮ ಗ್ರಾಮಸ್ಥರು ಹೆಚ್ಚುವರಿಯಾಗಿ ಬಂದ ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದರು. ಗ್ರಾಮಸ್ಥರಿಗೆ ಶಾಸಕ ಧೀರಜ್ ಮುನಿರಾಜು ಕೂಡ ಸಾಥ್ ನೀಡಿ ಕಸದ ಲಾರಿಗಳನ್ನು ವಾಪಸ್ ಕಳಿಸುವಲ್ಲಿ ಯಶಸ್ವಿಯಾಗಿದ್ದರು.

ಬುಧವಾರ ಕೂಡ ನಿಗದಿತ 70 ಲಾರಿಗಳು ಬಿಟ್ಟು ಹೆಚ್ಚುವರಿ ಲಾರಿಗಳು ಬರುವ ಆತಂಕದಿಂದ ಇಲ್ಲಿನ ಗ್ರಾಮಸ್ಥರು ಎಂಎಸ್ಜಿಪಿ ಘಟಕದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರು. ಇಡೀ ದಿನ ಗ್ರಾಮಸ್ಥರು ಬಂದು ಹೋಗುವ ಲಾರಿಗಳ ಮೇಲೆ ನಿಗಾವಹಿಸಿದ್ದರು.

ಸ್ಥಳಕ್ಕೆ ಡಿವೈಎಸ್ಪಿ ಬೇಟಿ ಪರಿಶೀಲನೆ:

ಎಂಎಸ್ ಜಿಪಿ ಘಟಕದ ಬಳಿಯ ಚಿಕ್ಕಮಂಕಳಾಲದ ಬಳಿ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಲಾಯಿತು. ಎಂಎಸ್ಜಿಪಿ ಘಟಕದ ಲಾರಿಗಳ ದಾಖಲಾತಿಗಳನ್ನ ಪರಿಶೀಲಿಸಿ ಒಳಗೆ ಬಿಡಲಾಯಿತು. ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ದೊಡ್ಡಬೆಳವಂಗಲ ಹೋಬಳಿ ಇನ್ಸ್ಪೆಕ್ಟರ್ ಕಲ್ಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಂಎಸ್ಜಿಪಿ ಘಟಕದ ಎಂ.ಡಿ ಪ್ರವೀಣ್ ಗೌಡ ಜೊತೆ ಡಿವೈಎಸ್ಪಿ ಪಾಂಡುರಂಗ ದೂರವಾಣಿ ಕರೆ ಮಾಡಿ ಲಾರಿಗಳ ಸಂಖ್ಯೆ, ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಬಳಿಕ ಹೆಚ್ಚುವರಿ ಲಾರಿಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿ ಎಚ್ಚರಿಕೆ ನೀಡಿದರು. ಸ್ಥಳದಲ್ಲಿ ಎಎಸ್ಐ ನೇತೃತ್ವದಲ್ಲಿ ಬಿಗಿ ಭದ್ರತೆಗೆ ಸೂಚಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕ ಧೀರಜ್ ತಿರುಗೇಟು:

ಅನುದಾನ ನೀಡಿಲ್ಲವೆಂದು ಹೇಳಿ ಕಸದ ಲಾರಿಗಳಿಗೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶಾಸಕ ಧೀರಜ್ ಮುನಿರಾಜು ಸವಾಲು ಹಾಕಿದ್ದಾರೆ. ದೊಡ್ಡಬಳ್ಳಾಪುರಕ್ಕೆ ಕಸದ ಘಟಕದ ಪರಿಣಾಮವಾಗಿ 10 ಕೋಟಿ ಕಸದ ಅನುದಾನವನ್ನ ಮೀಸಲಿರಿಸಿದ್ದಾರೆ. ಆದರೆ ನಾನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದಂತೆ ಅನುದಾನಕ್ಕೆ ಬೇಡಿಕೆ ಇಟ್ಟಿಲ್ಲ. ಕೇಳಿಲ್ಲ.. ಮುಂದೆಯೂ ಕೇಳಲ್ಲ.. ಇದರ ಬಗ್ಗೆ ನನ್ನ ಮನವಿ ಪತ್ರವಾಗಲಿ, ದೂರವಾಣಿ ಕರೆ ದಾಖಲೆಗಳಾಗಲಿ ಇದ್ದರೆ ಬಿಡುಗಡೆ ಮಾಡಲಿ ನಾನು ಸಿದ್ಧ, ಒಟ್ಟಾರೆ ನನಗೆ ಆ ಅನುದಾನವೂ ಬೇಡ. ಕಸದ ಘಟಕವೂ ಬೇಡ ಎಂದಿದ್ದಾರೆ.

ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ಧ:

ನಿನ್ನೆ ಅಂದಾಜು ಮಹದೇವಪುರ, ಬ್ಯಾಟರಾಯನಪುರದ ೪೦೦ ಕಸದ ಲಾರಿಗಳನ್ನು ವಾಪಸ್ ಕಳಿಸಿದ್ದೇನೆ. ತಾಲ್ಲೂಕಿಗೆ ಕಸವೂ ಬೇಡ.. ಕಸದ ಅನುದಾನವೂ ಬೇಡ.. ಜನರ ಪರ ನಿಂತು ಹೋರಾಟ ಮಾಡುತ್ತೇನೆ. ನೀವು ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ದ. ಏನೇ ಬೆದರಿಕೆ ಹಾಕಿದರೂ ಸಿದ್ದ, ನನ್ನ ಮನೆ ಮೇಲೆ ಕಸ ಸುರಿದರೂ ನಾನು ಸಿದ್ಧನಿದ್ದೇನೆ. ಜನರ ಪರವಾಗಿ ಯಾವುದೇ ಹೋರಾಟಕ್ಕೆ ಸಿದ್ದನಿದ್ದೇನೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ಕಸದ ಘಟಕದಿಂದಾಗಿ ಈ ಭಾಗದ ಎರಡು ಗ್ರಾಮ ಪಂಚಾಯ್ತಿಗಳ ಪ್ರದೇಶದಲ್ಲಿ ನೆಲ, ಜಲ, ವಾಯು ಸಂಪೂರ್ಣ ಕಲುಷಿತಗೊಂಡಿದೆ. ಈ ಭಾಗದ ಜನರು ಅನೇಕ ರೋಗ ರುಜಿನಗಳಿಗೆ ತುತ್ತಾಗಿದ್ದಾರೆ. ಜಾನುವಾರು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದಕ್ಕೆಲ್ಲ ಯಾರು ಹೊಣೆ. ಜನರು ಘಟಕವನ್ನು ಸ್ಥಗಿತಗೊಳಿಸಲು ಅಧಿಕಾರ ನೀಡಿದ್ದಾರೆ. ಜನರ ಪರವಾಗಿ ನಿಲ್ಲುತ್ತೇನೆ. ಕಸವನ್ನು ಸುರಿಯುವುದಿದ್ದರೆ ಆರ್. ಆಶೋಕ್, ಬಿ.ವೈ ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆ ಏಕೆ ನನ್ನ ಮನೆ ಮುಂದೆಯೇ ಸುರಿಯಲಿ. ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ ಹೋರಾಟಕ್ಕೆ ಸಿದ್ದ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದ್ದಾರೆ.

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

7 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

7 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

7 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

16 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

18 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago