ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ ಲಾರಿಗಳು ದೊಡ್ಡಬಳ್ಳಾಪುರದ ಎಂಎಸ್ ಜಿಪಿ ಘಟಕದತ್ತ ಮುಖಮಾಡಿದ್ದವು. ವಿಷಯ ತಿಳಿದ ಇಲ್ಲಿನ ಸುತ್ತಮುತ್ತಲಿಮ ಗ್ರಾಮಸ್ಥರು ಹೆಚ್ಚುವರಿಯಾಗಿ ಬಂದ ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದರು. ಗ್ರಾಮಸ್ಥರಿಗೆ ಶಾಸಕ ಧೀರಜ್ ಮುನಿರಾಜು ಕೂಡ ಸಾಥ್ ನೀಡಿ ಕಸದ ಲಾರಿಗಳನ್ನು ವಾಪಸ್ ಕಳಿಸುವಲ್ಲಿ ಯಶಸ್ವಿಯಾಗಿದ್ದರು.

ಬುಧವಾರ ಕೂಡ ನಿಗದಿತ 70 ಲಾರಿಗಳು ಬಿಟ್ಟು ಹೆಚ್ಚುವರಿ ಲಾರಿಗಳು ಬರುವ ಆತಂಕದಿಂದ ಇಲ್ಲಿನ ಗ್ರಾಮಸ್ಥರು ಎಂಎಸ್ಜಿಪಿ ಘಟಕದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರು. ಇಡೀ ದಿನ ಗ್ರಾಮಸ್ಥರು ಬಂದು ಹೋಗುವ ಲಾರಿಗಳ ಮೇಲೆ ನಿಗಾವಹಿಸಿದ್ದರು.

ಸ್ಥಳಕ್ಕೆ ಡಿವೈಎಸ್ಪಿ ಬೇಟಿ ಪರಿಶೀಲನೆ:

ಎಂಎಸ್ ಜಿಪಿ ಘಟಕದ ಬಳಿಯ ಚಿಕ್ಕಮಂಕಳಾಲದ ಬಳಿ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಲಾಯಿತು. ಎಂಎಸ್ಜಿಪಿ ಘಟಕದ ಲಾರಿಗಳ ದಾಖಲಾತಿಗಳನ್ನ ಪರಿಶೀಲಿಸಿ ಒಳಗೆ ಬಿಡಲಾಯಿತು. ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ದೊಡ್ಡಬೆಳವಂಗಲ ಹೋಬಳಿ ಇನ್ಸ್ಪೆಕ್ಟರ್ ಕಲ್ಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಂಎಸ್ಜಿಪಿ ಘಟಕದ ಎಂ.ಡಿ ಪ್ರವೀಣ್ ಗೌಡ ಜೊತೆ ಡಿವೈಎಸ್ಪಿ ಪಾಂಡುರಂಗ ದೂರವಾಣಿ ಕರೆ ಮಾಡಿ ಲಾರಿಗಳ ಸಂಖ್ಯೆ, ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಬಳಿಕ ಹೆಚ್ಚುವರಿ ಲಾರಿಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿ ಎಚ್ಚರಿಕೆ ನೀಡಿದರು. ಸ್ಥಳದಲ್ಲಿ ಎಎಸ್ಐ ನೇತೃತ್ವದಲ್ಲಿ ಬಿಗಿ ಭದ್ರತೆಗೆ ಸೂಚಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕ ಧೀರಜ್ ತಿರುಗೇಟು:

ಅನುದಾನ ನೀಡಿಲ್ಲವೆಂದು ಹೇಳಿ ಕಸದ ಲಾರಿಗಳಿಗೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶಾಸಕ ಧೀರಜ್ ಮುನಿರಾಜು ಸವಾಲು ಹಾಕಿದ್ದಾರೆ. ದೊಡ್ಡಬಳ್ಳಾಪುರಕ್ಕೆ ಕಸದ ಘಟಕದ ಪರಿಣಾಮವಾಗಿ 10 ಕೋಟಿ ಕಸದ ಅನುದಾನವನ್ನ ಮೀಸಲಿರಿಸಿದ್ದಾರೆ. ಆದರೆ ನಾನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದಂತೆ ಅನುದಾನಕ್ಕೆ ಬೇಡಿಕೆ ಇಟ್ಟಿಲ್ಲ. ಕೇಳಿಲ್ಲ.. ಮುಂದೆಯೂ ಕೇಳಲ್ಲ.. ಇದರ ಬಗ್ಗೆ ನನ್ನ ಮನವಿ ಪತ್ರವಾಗಲಿ, ದೂರವಾಣಿ ಕರೆ ದಾಖಲೆಗಳಾಗಲಿ ಇದ್ದರೆ ಬಿಡುಗಡೆ ಮಾಡಲಿ ನಾನು ಸಿದ್ಧ, ಒಟ್ಟಾರೆ ನನಗೆ ಆ ಅನುದಾನವೂ ಬೇಡ. ಕಸದ ಘಟಕವೂ ಬೇಡ ಎಂದಿದ್ದಾರೆ.

ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ಧ:

ನಿನ್ನೆ ಅಂದಾಜು ಮಹದೇವಪುರ, ಬ್ಯಾಟರಾಯನಪುರದ ೪೦೦ ಕಸದ ಲಾರಿಗಳನ್ನು ವಾಪಸ್ ಕಳಿಸಿದ್ದೇನೆ. ತಾಲ್ಲೂಕಿಗೆ ಕಸವೂ ಬೇಡ.. ಕಸದ ಅನುದಾನವೂ ಬೇಡ.. ಜನರ ಪರ ನಿಂತು ಹೋರಾಟ ಮಾಡುತ್ತೇನೆ. ನೀವು ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ದ. ಏನೇ ಬೆದರಿಕೆ ಹಾಕಿದರೂ ಸಿದ್ದ, ನನ್ನ ಮನೆ ಮೇಲೆ ಕಸ ಸುರಿದರೂ ನಾನು ಸಿದ್ಧನಿದ್ದೇನೆ. ಜನರ ಪರವಾಗಿ ಯಾವುದೇ ಹೋರಾಟಕ್ಕೆ ಸಿದ್ದನಿದ್ದೇನೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ಕಸದ ಘಟಕದಿಂದಾಗಿ ಈ ಭಾಗದ ಎರಡು ಗ್ರಾಮ ಪಂಚಾಯ್ತಿಗಳ ಪ್ರದೇಶದಲ್ಲಿ ನೆಲ, ಜಲ, ವಾಯು ಸಂಪೂರ್ಣ ಕಲುಷಿತಗೊಂಡಿದೆ. ಈ ಭಾಗದ ಜನರು ಅನೇಕ ರೋಗ ರುಜಿನಗಳಿಗೆ ತುತ್ತಾಗಿದ್ದಾರೆ. ಜಾನುವಾರು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದಕ್ಕೆಲ್ಲ ಯಾರು ಹೊಣೆ. ಜನರು ಘಟಕವನ್ನು ಸ್ಥಗಿತಗೊಳಿಸಲು ಅಧಿಕಾರ ನೀಡಿದ್ದಾರೆ. ಜನರ ಪರವಾಗಿ ನಿಲ್ಲುತ್ತೇನೆ. ಕಸವನ್ನು ಸುರಿಯುವುದಿದ್ದರೆ ಆರ್. ಆಶೋಕ್, ಬಿ.ವೈ ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆ ಏಕೆ ನನ್ನ ಮನೆ ಮುಂದೆಯೇ ಸುರಿಯಲಿ. ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ ಹೋರಾಟಕ್ಕೆ ಸಿದ್ದ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago