ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ ಲಾರಿಗಳು ದೊಡ್ಡಬಳ್ಳಾಪುರದ ಎಂಎಸ್ ಜಿಪಿ ಘಟಕದತ್ತ ಮುಖಮಾಡಿದ್ದವು. ವಿಷಯ ತಿಳಿದ ಇಲ್ಲಿನ ಸುತ್ತಮುತ್ತಲಿಮ ಗ್ರಾಮಸ್ಥರು ಹೆಚ್ಚುವರಿಯಾಗಿ ಬಂದ ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದರು. ಗ್ರಾಮಸ್ಥರಿಗೆ ಶಾಸಕ ಧೀರಜ್ ಮುನಿರಾಜು ಕೂಡ ಸಾಥ್ ನೀಡಿ ಕಸದ ಲಾರಿಗಳನ್ನು ವಾಪಸ್ ಕಳಿಸುವಲ್ಲಿ ಯಶಸ್ವಿಯಾಗಿದ್ದರು.

ಬುಧವಾರ ಕೂಡ ನಿಗದಿತ 70 ಲಾರಿಗಳು ಬಿಟ್ಟು ಹೆಚ್ಚುವರಿ ಲಾರಿಗಳು ಬರುವ ಆತಂಕದಿಂದ ಇಲ್ಲಿನ ಗ್ರಾಮಸ್ಥರು ಎಂಎಸ್ಜಿಪಿ ಘಟಕದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರು. ಇಡೀ ದಿನ ಗ್ರಾಮಸ್ಥರು ಬಂದು ಹೋಗುವ ಲಾರಿಗಳ ಮೇಲೆ ನಿಗಾವಹಿಸಿದ್ದರು.

ಸ್ಥಳಕ್ಕೆ ಡಿವೈಎಸ್ಪಿ ಬೇಟಿ ಪರಿಶೀಲನೆ:

ಎಂಎಸ್ ಜಿಪಿ ಘಟಕದ ಬಳಿಯ ಚಿಕ್ಕಮಂಕಳಾಲದ ಬಳಿ ಲಾರಿಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸಲಾಯಿತು. ಎಂಎಸ್ಜಿಪಿ ಘಟಕದ ಲಾರಿಗಳ ದಾಖಲಾತಿಗಳನ್ನ ಪರಿಶೀಲಿಸಿ ಒಳಗೆ ಬಿಡಲಾಯಿತು. ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ದೊಡ್ಡಬೆಳವಂಗಲ ಹೋಬಳಿ ಇನ್ಸ್ಪೆಕ್ಟರ್ ಕಲ್ಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಂಎಸ್ಜಿಪಿ ಘಟಕದ ಎಂ.ಡಿ ಪ್ರವೀಣ್ ಗೌಡ ಜೊತೆ ಡಿವೈಎಸ್ಪಿ ಪಾಂಡುರಂಗ ದೂರವಾಣಿ ಕರೆ ಮಾಡಿ ಲಾರಿಗಳ ಸಂಖ್ಯೆ, ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಬಳಿಕ ಹೆಚ್ಚುವರಿ ಲಾರಿಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿ ಎಚ್ಚರಿಕೆ ನೀಡಿದರು. ಸ್ಥಳದಲ್ಲಿ ಎಎಸ್ಐ ನೇತೃತ್ವದಲ್ಲಿ ಬಿಗಿ ಭದ್ರತೆಗೆ ಸೂಚಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕ ಧೀರಜ್ ತಿರುಗೇಟು:

ಅನುದಾನ ನೀಡಿಲ್ಲವೆಂದು ಹೇಳಿ ಕಸದ ಲಾರಿಗಳಿಗೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶಾಸಕ ಧೀರಜ್ ಮುನಿರಾಜು ಸವಾಲು ಹಾಕಿದ್ದಾರೆ. ದೊಡ್ಡಬಳ್ಳಾಪುರಕ್ಕೆ ಕಸದ ಘಟಕದ ಪರಿಣಾಮವಾಗಿ 10 ಕೋಟಿ ಕಸದ ಅನುದಾನವನ್ನ ಮೀಸಲಿರಿಸಿದ್ದಾರೆ. ಆದರೆ ನಾನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದಂತೆ ಅನುದಾನಕ್ಕೆ ಬೇಡಿಕೆ ಇಟ್ಟಿಲ್ಲ. ಕೇಳಿಲ್ಲ.. ಮುಂದೆಯೂ ಕೇಳಲ್ಲ.. ಇದರ ಬಗ್ಗೆ ನನ್ನ ಮನವಿ ಪತ್ರವಾಗಲಿ, ದೂರವಾಣಿ ಕರೆ ದಾಖಲೆಗಳಾಗಲಿ ಇದ್ದರೆ ಬಿಡುಗಡೆ ಮಾಡಲಿ ನಾನು ಸಿದ್ಧ, ಒಟ್ಟಾರೆ ನನಗೆ ಆ ಅನುದಾನವೂ ಬೇಡ. ಕಸದ ಘಟಕವೂ ಬೇಡ ಎಂದಿದ್ದಾರೆ.

ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ಧ:

ನಿನ್ನೆ ಅಂದಾಜು ಮಹದೇವಪುರ, ಬ್ಯಾಟರಾಯನಪುರದ ೪೦೦ ಕಸದ ಲಾರಿಗಳನ್ನು ವಾಪಸ್ ಕಳಿಸಿದ್ದೇನೆ. ತಾಲ್ಲೂಕಿಗೆ ಕಸವೂ ಬೇಡ.. ಕಸದ ಅನುದಾನವೂ ಬೇಡ.. ಜನರ ಪರ ನಿಂತು ಹೋರಾಟ ಮಾಡುತ್ತೇನೆ. ನೀವು ಎಸ್ಮಾ ಕಾಯ್ದೆ ಜಾರಿ ಮಾಡಿದರೂ ನಾನು ಸಿದ್ದ. ಏನೇ ಬೆದರಿಕೆ ಹಾಕಿದರೂ ಸಿದ್ದ, ನನ್ನ ಮನೆ ಮೇಲೆ ಕಸ ಸುರಿದರೂ ನಾನು ಸಿದ್ಧನಿದ್ದೇನೆ. ಜನರ ಪರವಾಗಿ ಯಾವುದೇ ಹೋರಾಟಕ್ಕೆ ಸಿದ್ದನಿದ್ದೇನೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ಕಸದ ಘಟಕದಿಂದಾಗಿ ಈ ಭಾಗದ ಎರಡು ಗ್ರಾಮ ಪಂಚಾಯ್ತಿಗಳ ಪ್ರದೇಶದಲ್ಲಿ ನೆಲ, ಜಲ, ವಾಯು ಸಂಪೂರ್ಣ ಕಲುಷಿತಗೊಂಡಿದೆ. ಈ ಭಾಗದ ಜನರು ಅನೇಕ ರೋಗ ರುಜಿನಗಳಿಗೆ ತುತ್ತಾಗಿದ್ದಾರೆ. ಜಾನುವಾರು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದಕ್ಕೆಲ್ಲ ಯಾರು ಹೊಣೆ. ಜನರು ಘಟಕವನ್ನು ಸ್ಥಗಿತಗೊಳಿಸಲು ಅಧಿಕಾರ ನೀಡಿದ್ದಾರೆ. ಜನರ ಪರವಾಗಿ ನಿಲ್ಲುತ್ತೇನೆ. ಕಸವನ್ನು ಸುರಿಯುವುದಿದ್ದರೆ ಆರ್. ಆಶೋಕ್, ಬಿ.ವೈ ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆ ಏಕೆ ನನ್ನ ಮನೆ ಮುಂದೆಯೇ ಸುರಿಯಲಿ. ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ ಹೋರಾಟಕ್ಕೆ ಸಿದ್ದ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago